ಮೈಸೂರು ನಗರ

ಮೈಸೂರಿನಲ್ಲಿ ಬೆಳ್ಳಂ ಬೆಳಗ್ಗೆಯೇ ಘರ್ಜಿಸಿದ ಜೆಸಿಬಿ: ಮುಡಾ ಅಧಿಕಾರಿಗಳಿಂದ 8 ಎಕರೆ 28 ಗುಂಟೆ ಜಾಗ ವಶಕ್ಕೆ

ಮೈಸೂರು: ಮೈಸೂರಿನಲ್ಲಿ ಬೆಳ್ಳಂ ಬೆಳಗ್ಗೆಯೇ ಜೆಸಿಬಿಗಳು ಘರ್ಜಿಸಿದ್ದು, 8 ಎಕರೆ 28 ಗುಂಟೆ ಜಾಗವನ್ನು ಮುಡಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ವಿಜಯನಗರ 4ನೇ ಹಂತದಲ್ಲಿ ಇಂದು ಬೆಳಿಗ್ಗೆ ತೆರವು ಕಾರ್ಯಾಚರಣೆ ನಡೆದಿದೆ.‌

ಹಲವಾರು ವರ್ಷಗಳಿಂದ ವಾಸವಿದ್ದ ಜನರು ಸ್ವಲ್ಪ ಕಾಲವಕಾಶ ನೀಡಿ ಎಂದು ಅಳಲು ತೋಡಿಕೊಂಡರೂ ಬಿಡದ ಮುಡಾ ಅಧಿಕಾರಿಗಳು ಮನೆಗಳ ತೆರವಿಗೆ ಮುಂದಾದರು. ಈ ವೇಳೆ ನಿವಾಸಿಗಳ ಹಾಗೂ ಮುಡಾ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು.

ಬಳಿಕ ಪೊಲೀಸರ ಸರ್ಪಗಾವಲಿನಲ್ಲಿ ನಡೆದ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಸರ್ವೇ ನಂಬರ್ 108, 109ರ ಜಾಗವನ್ನು ವಶಪಡಿಸಿಕೊಳ್ಳಲಾಯಿತು. ಕಳೆದ 2002ರಲ್ಲಿ 8 ಎಕರೆ ಜಾಗಕ್ಕೆ ಮುಡಾ 4 ಲಕ್ಷ ಪರಿಹಾರ ನೀಡಿತ್ತು. ಆದರೆ ನಿವಾಸಿಗಳು
ಮೂಡ ನೀಡಿದ್ದ ಪರಿಹಾರ ತೆಗೆದುಕೊಳ್ಳಲಿಲ್ಲ ಎನ್ನಲಾಗಿದ್ದು, ಮೂಡ ಅಧಿಕಾರಿಗಳ ಬಳಿ ಕಾಲಾವಕಾಶ ಕೇಳಿಕೊಂಡಿದ್ದರು.
ಸದ್ಯ ಈ ಪ್ರಕರಣ ಹೈ ಕೋರ್ಟ್‌ನ ಡಬಲ್ ಬೆಂಚ್‌ನಲ್ಲಿದೆ.

 

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago