ಮೈಸೂರು ನಗರ

ಮುಡಾ ಹಗರಣ: 631 ಸೈಟ್‌ಗಳ ಬೇನಾಮಿ ಆಸ್ತಿ ಹಿಂದೆ ಬಿದ್ದ ಇ.ಡಿ.

ಮೈಸೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.)ಅಧಿಕಾರಿಗಳು ತನಿಖೆ ನಡೆಸುತ್ತಿದ್ದು 631 ಸೈಟ್‌ಗಳು ಬೇನಾಮಿ ಆಸ್ತಿಯ ಭ್ರಷ್ಟಾಚಾರ ಕಂಡು ಬಂದಿದೆ.  ಈ  ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಅಕ್ರಮಗಳು ಹೆಚ್ಚಾಗುತ್ತಿದ್ದು, ಇ.ಡಿ.ತನಿಖಾ ಸಂಸ್ಥೆಯೂ 142 ನಿವೇಶನಗಳ ಬಗ್ಗೆ ಈಗಾಗಲೇ ತನಿಖೆ ನಡೆಸಿದೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದ್ದು, ಮುಡಾದಲ್ಲಿ 631 ನಿವೇಶನಗಳು ಅಕ್ರಮವಾಗಿ ಹಂಚಿಕೆಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಇ.ಡಿ.ಅಧಿಕಾರಿಗಳು ಮುಡಾ ಕಚೇರಿಯಲ್ಲಿಯೇ ತನಿಖೆಯನ್ನು ಮುಂದುವರೆಸಿದ್ದು,  2024ರ ಡಿಸೆಂಬರ್‌ 12ರಂದು ದಾಖಲೆ ಆಧಾರದಲ್ಲಿ ಪತ್ರ ಬರೆದು ನಿವೇಶನಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದರು.

ಇನ್ನೂ ಮುಡಾದಿಂದ 631 ನಿವೇಶನಗಳನ್ನು ಅಕ್ರಮವಾಗಿ ಖರೀದಿಸುವಾಗ ಕಪ್ಪು ಹಣವನ್ನು ವರ್ಗಾಯಿಸಿ ವಹಿವಾಟು ಮಾಡಲಾಗಿದೆ ಎಂಬ ಅಂಶ ಹೊರ ಬಿದ್ದಿದೆ. ಆದರೆ  ಈ ನಿವೇಶನಗಳು ಬೇನಾಮಿ ಆಸ್ತಿಯಾಗಿವೆ ಎಂದು ಇ.ಡಿ. ಅಧಿಕಾರಿಗಳು ವರದಿ ಮಾಡಿದ್ದು, 128 ನಿವೇಶನಗಳು ಹಾಲಿ ವಿಧಾನ ಪರಿಷತ್‌ ಸದಸ್ಯ, ಯೋಜನಾ ಅಧಿಕಾರಿಗೆ 92 ಹಾಗೂ 198 ನಿವೇಶನಗಳು ಮಾಜಿ ಆಯುಕ್ತರ ಹೆಸರಿನಲ್ಲಿವೆ. ಅಲ್ಲದೇ ಈ ಎಲ್ಲಾ  ನಿವೇಶನಗಳು ಸಹ ಅಧಿಕಾರಿಗಳಿಗೂ ಮತ್ತು ನಾಯಕರಿಗೇ ಸೇರಿದ್ದವಾಗಿವೆ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಮುಡಾ ಅಧಿಕಾರಿಗಳಿಗೆ ಅಕ್ರಮ ಹಣ ವರ್ಗಾವಣೆ ಹಾಗೂ ಸಂಪೂರ್ಣ ಆಸ್ತಿ ವಿವರದ ಬಗ್ಗೆ ವರದಿ  ನೀಡುವಂತೆ ಇ.ಡಿ.ತನಿಖಾ ಸಂಸ್ಥೆ ತಿಳಿಸಿದೆ.

ಅರ್ಚನ ಎಸ್‌ ಎಸ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

7 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

8 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

10 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

10 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

10 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

10 hours ago