ಮೈಸೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.)ಅಧಿಕಾರಿಗಳು ತನಿಖೆ ನಡೆಸುತ್ತಿದ್ದು 631 ಸೈಟ್ಗಳು ಬೇನಾಮಿ ಆಸ್ತಿಯ ಭ್ರಷ್ಟಾಚಾರ ಕಂಡು ಬಂದಿದೆ. ಈ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.
ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಅಕ್ರಮಗಳು ಹೆಚ್ಚಾಗುತ್ತಿದ್ದು, ಇ.ಡಿ.ತನಿಖಾ ಸಂಸ್ಥೆಯೂ 142 ನಿವೇಶನಗಳ ಬಗ್ಗೆ ಈಗಾಗಲೇ ತನಿಖೆ ನಡೆಸಿದೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಮುಡಾದಲ್ಲಿ 631 ನಿವೇಶನಗಳು ಅಕ್ರಮವಾಗಿ ಹಂಚಿಕೆಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಇ.ಡಿ.ಅಧಿಕಾರಿಗಳು ಮುಡಾ ಕಚೇರಿಯಲ್ಲಿಯೇ ತನಿಖೆಯನ್ನು ಮುಂದುವರೆಸಿದ್ದು, 2024ರ ಡಿಸೆಂಬರ್ 12ರಂದು ದಾಖಲೆ ಆಧಾರದಲ್ಲಿ ಪತ್ರ ಬರೆದು ನಿವೇಶನಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದರು.
ಇನ್ನೂ ಮುಡಾದಿಂದ 631 ನಿವೇಶನಗಳನ್ನು ಅಕ್ರಮವಾಗಿ ಖರೀದಿಸುವಾಗ ಕಪ್ಪು ಹಣವನ್ನು ವರ್ಗಾಯಿಸಿ ವಹಿವಾಟು ಮಾಡಲಾಗಿದೆ ಎಂಬ ಅಂಶ ಹೊರ ಬಿದ್ದಿದೆ. ಆದರೆ ಈ ನಿವೇಶನಗಳು ಬೇನಾಮಿ ಆಸ್ತಿಯಾಗಿವೆ ಎಂದು ಇ.ಡಿ. ಅಧಿಕಾರಿಗಳು ವರದಿ ಮಾಡಿದ್ದು, 128 ನಿವೇಶನಗಳು ಹಾಲಿ ವಿಧಾನ ಪರಿಷತ್ ಸದಸ್ಯ, ಯೋಜನಾ ಅಧಿಕಾರಿಗೆ 92 ಹಾಗೂ 198 ನಿವೇಶನಗಳು ಮಾಜಿ ಆಯುಕ್ತರ ಹೆಸರಿನಲ್ಲಿವೆ. ಅಲ್ಲದೇ ಈ ಎಲ್ಲಾ ನಿವೇಶನಗಳು ಸಹ ಅಧಿಕಾರಿಗಳಿಗೂ ಮತ್ತು ನಾಯಕರಿಗೇ ಸೇರಿದ್ದವಾಗಿವೆ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಮುಡಾ ಅಧಿಕಾರಿಗಳಿಗೆ ಅಕ್ರಮ ಹಣ ವರ್ಗಾವಣೆ ಹಾಗೂ ಸಂಪೂರ್ಣ ಆಸ್ತಿ ವಿವರದ ಬಗ್ಗೆ ವರದಿ ನೀಡುವಂತೆ ಇ.ಡಿ.ತನಿಖಾ ಸಂಸ್ಥೆ ತಿಳಿಸಿದೆ.
ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…
ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…
ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…