ಮೈಸೂರು ನಗರ

ಮುಡಾ ಹಗರಣ: 631 ಸೈಟ್‌ಗಳ ಬೇನಾಮಿ ಆಸ್ತಿ ಹಿಂದೆ ಬಿದ್ದ ಇ.ಡಿ.

ಮೈಸೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.)ಅಧಿಕಾರಿಗಳು ತನಿಖೆ ನಡೆಸುತ್ತಿದ್ದು 631 ಸೈಟ್‌ಗಳು ಬೇನಾಮಿ ಆಸ್ತಿಯ ಭ್ರಷ್ಟಾಚಾರ ಕಂಡು ಬಂದಿದೆ.  ಈ  ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಅಕ್ರಮಗಳು ಹೆಚ್ಚಾಗುತ್ತಿದ್ದು, ಇ.ಡಿ.ತನಿಖಾ ಸಂಸ್ಥೆಯೂ 142 ನಿವೇಶನಗಳ ಬಗ್ಗೆ ಈಗಾಗಲೇ ತನಿಖೆ ನಡೆಸಿದೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದ್ದು, ಮುಡಾದಲ್ಲಿ 631 ನಿವೇಶನಗಳು ಅಕ್ರಮವಾಗಿ ಹಂಚಿಕೆಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಇ.ಡಿ.ಅಧಿಕಾರಿಗಳು ಮುಡಾ ಕಚೇರಿಯಲ್ಲಿಯೇ ತನಿಖೆಯನ್ನು ಮುಂದುವರೆಸಿದ್ದು,  2024ರ ಡಿಸೆಂಬರ್‌ 12ರಂದು ದಾಖಲೆ ಆಧಾರದಲ್ಲಿ ಪತ್ರ ಬರೆದು ನಿವೇಶನಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದರು.

ಇನ್ನೂ ಮುಡಾದಿಂದ 631 ನಿವೇಶನಗಳನ್ನು ಅಕ್ರಮವಾಗಿ ಖರೀದಿಸುವಾಗ ಕಪ್ಪು ಹಣವನ್ನು ವರ್ಗಾಯಿಸಿ ವಹಿವಾಟು ಮಾಡಲಾಗಿದೆ ಎಂಬ ಅಂಶ ಹೊರ ಬಿದ್ದಿದೆ. ಆದರೆ  ಈ ನಿವೇಶನಗಳು ಬೇನಾಮಿ ಆಸ್ತಿಯಾಗಿವೆ ಎಂದು ಇ.ಡಿ. ಅಧಿಕಾರಿಗಳು ವರದಿ ಮಾಡಿದ್ದು, 128 ನಿವೇಶನಗಳು ಹಾಲಿ ವಿಧಾನ ಪರಿಷತ್‌ ಸದಸ್ಯ, ಯೋಜನಾ ಅಧಿಕಾರಿಗೆ 92 ಹಾಗೂ 198 ನಿವೇಶನಗಳು ಮಾಜಿ ಆಯುಕ್ತರ ಹೆಸರಿನಲ್ಲಿವೆ. ಅಲ್ಲದೇ ಈ ಎಲ್ಲಾ  ನಿವೇಶನಗಳು ಸಹ ಅಧಿಕಾರಿಗಳಿಗೂ ಮತ್ತು ನಾಯಕರಿಗೇ ಸೇರಿದ್ದವಾಗಿವೆ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಮುಡಾ ಅಧಿಕಾರಿಗಳಿಗೆ ಅಕ್ರಮ ಹಣ ವರ್ಗಾವಣೆ ಹಾಗೂ ಸಂಪೂರ್ಣ ಆಸ್ತಿ ವಿವರದ ಬಗ್ಗೆ ವರದಿ  ನೀಡುವಂತೆ ಇ.ಡಿ.ತನಿಖಾ ಸಂಸ್ಥೆ ತಿಳಿಸಿದೆ.

ಅರ್ಚನ ಎಸ್‌ ಎಸ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

4 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

5 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

6 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

7 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

7 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

8 hours ago