ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಸ್ನೇಹಮಯಿ ಕೃಷ್ಣ ಒತ್ತಾಯಿಸಿದ್ದಾರೆ.
ಇಂದು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ ದೂರುದಾರ ಸ್ಮೇಹಮಯಿ ಕೃಷ್ಣ ಅವರು, ಲೋಕಾಯುಕ್ತ ಎಸ್ಪಿ ಉದೇಶ್ರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ವಿಚಾರಣೆ ವೇಳೆ ಲೋಕಾಯುಕ್ತ ಕಚೇರಿಯಲ್ಲಿ ಸಿಸಿ ಕ್ಯಾಮರಾ ಇಲ್ಲ. ಹೀಗಾಗಿ ಕ್ಯಾಮೆರಾ ಅಳವಡಿಸುವಂತೆಯೂ ಕೂಡ ಮನವಿ ಸಲ್ಲಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಈಗಾಗಲೇ ತನಿಖೆ ಆರಂಭಿಸಿದ್ದು, ಮೊದಲ ಹಂತದಲ್ಲಿ ಎ3 ಆರೋಪಿ ಮಲ್ಲಿಕಾರ್ಜುನಸ್ವಾಮಿ ಮತ್ತು ಎ4 ಆರೋಪಿ ದೇವರಾಜು ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯರನ್ನೇ ಇದುವರೆಗೂ ವಿಚಾರಣೆಗೆ ಒಳಪಡಿಸಿಲ್ಲ. ಹೀಗಾಗಿ ತಕ್ಷಣವೇ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…