ಮೈಸೂರು ನಗರ

ಸಿಎಂ ಸಿದ್ದರಾಮಯ್ಯರನ್ನು ಆದಷ್ಟು ಬೇಗ ವಿಚಾರಣೆಗೆ ಒಳಪಡಿಸಬೇಕು: ದೂರುದಾರ ಸ್ನೇಹಮಯಿ ಕೃಷ್ಣ ಆಗ್ರಹ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಸ್ನೇಹಮಯಿ ಕೃಷ್ಣ ಒತ್ತಾಯಿಸಿದ್ದಾರೆ.

ಇಂದು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ ದೂರುದಾರ ಸ್ಮೇಹಮಯಿ ಕೃಷ್ಣ ಅವರು, ಲೋಕಾಯುಕ್ತ ಎಸ್‌ಪಿ ಉದೇಶ್‌ರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ವಿಚಾರಣೆ ವೇಳೆ ಲೋಕಾಯುಕ್ತ ಕಚೇರಿಯಲ್ಲಿ ಸಿಸಿ ಕ್ಯಾಮರಾ ಇಲ್ಲ. ಹೀಗಾಗಿ ಕ್ಯಾಮೆರಾ ಅಳವಡಿಸುವಂತೆಯೂ ಕೂಡ ಮನವಿ ಸಲ್ಲಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಈಗಾಗಲೇ ತನಿಖೆ ಆರಂಭಿಸಿದ್ದು, ಮೊದಲ ಹಂತದಲ್ಲಿ ಎ3 ಆರೋಪಿ ಮಲ್ಲಿಕಾರ್ಜುನಸ್ವಾಮಿ ಮತ್ತು ಎ4 ಆರೋಪಿ ದೇವರಾಜು ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯರನ್ನೇ ಇದುವರೆಗೂ ವಿಚಾರಣೆಗೆ ಒಳಪಡಿಸಿಲ್ಲ. ಹೀಗಾಗಿ ತಕ್ಷಣವೇ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago