ಮೈಸೂರು ನಗರ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂಸದ ಯದುವೀರ್‌ ಆಗ್ರಹ

ಮೈಸೂರು: ಮುಡಾ ಪ್ರಕರಣದಲ್ಲಿ ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ, ಕೋಟ್ಯಾಂತರ ರೂ.ಗಳಷ್ಟು ಹಗರಣ ನಡೆದಿದೆ ಎಂದು ವರದಿ ನೀಡಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಜನವರಿ.18) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇ.ಡಿ.ಅಧಿಕಾರಿಗಳು ಮುಡಾ ಪ್ರಕರಣದ ಬಗ್ಗೆ ತನಿಖೆ ನಡೆಸಿ ಸಿಎಂ ತವರು ಜಿಲ್ಲೆಯ ಮುಡಾ ಕಚೇರಿಯಲ್ಲಿ ಹಗರಣ ನಡೆದಿದೆ ಎಂಬ ವಿಚಾರವನ್ನು ವರದಿ ಮಾಡಿದೆ. ಅಲ್ಲದೇ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರಿನ ತಳಕು ಹಾಕಿಕೊಂಡ ಮೊದಲ ದಿನದಿಂದಲೂ ನಮ್ಮ ಪಕ್ಷದವರು ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡದೆ ಭಂಡತನ ಪ್ರದರ್ಶಿಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಹೈಕಮಾಂಡ್‌ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಮುಡಾ ಹಗರಣದಲ್ಲಿ ಸದ್ಯಕ್ಕೆ ವಿಚಾರಣೆ ಮುಗಿಯುವುದಿಲ್ಲ. ಮುಡಾದಿಂದ ಪಡೆದಿದ್ದ ನಿವೇಶನಗಳನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಅವರ ಪತ್ನಿಯೇ ಮುಡಾ ಕಚೇರಿಗೆ ಹಿಂತಿರುಗಿಸಿದ್ದಾರೆ. ಇನ್ನೂ ಇ.ಡಿ.ತನಿಖೆಯಲ್ಲಿ ಮುಡಾದಲ್ಲಾದ ಕೋಟ್ಯಾಂತರ ರೂಪಾಯಿಯ ಹಗರಣ ಬೆಳಕಿಗೆ ಬಂದಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಈ ತನಿಖೆಯಲ್ಲಿ ಸಿದ್ದರಾಮಯ್ಯನವರು ತಪ್ಪಿಸ್ಥರಲ್ಲ ಎಂದರೆ ಮತ್ತೊಮ್ಮೆ ಸಿಎಂ ಅಧಿಕಾರವನ್ನು ವಹಿಸಿಕೊಂಡು ಮುಂದುವರೆಯಬೇಕು. ಆದಾಗ್ಯೂ ಸದ್ಯಕ್ಕೆ ಅವರ ವಿರುದ್ಧ ಕಾಂಗ್ರೆಸ್‌ ಹೈಕಮಾಂಡ್‌ ಅಗತ್ಯ ಕ್ರಮ ಕೈಗೊಳ್ಳಬೇಕು. ಆದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವರೆಗೂ ಬಿಜೆಪಿಯ ಹೋರಾಟ ಇನ್ನಷ್ಟು ಮುಂದುವರೆಯಲಿದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಎಲ್‌.ನಾಗೇಂದ್ರ

ಇದೇ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಎಲ್‌.ನಾಗೇಂದ್ರ ಅವರು ಈ ವಿಚಾರದ ಬಗ್ಗೆ ಮಾತನಾಡಿ, ಮುಡಾ ಹಗರಣದಲ್ಲಿ ಮತ್ತಷ್ಟು ಅವ್ಯವಹಾರ ನಡೆದಿದೆ ಎಂಬ ವಿಚಾರ ಇ.ಡಿ.ಅಧಿಕಾರಿಗಳ ತನಿಖೆಯಿಂದ ಕಂಡು ಬಂದಿದೆ. ನಿನ್ನೆಯ(ಜ.17) ಪ್ರೆಸ್‌ ರಿಲೀಸ್‌ನಲ್ಲಿ ಇ.ಡಿ.ಸಂಸ್ಥೆಯೂ ಮುಡಾ ಪ್ರಕರಣದಲ್ಲಿ ಅಕ್ರಮ ನಡೆದಿದೆ ಎಂದು ವರದಿ ನೀಡಿದೆ. ಅಲ್ಲದೇ ಮುಡಾ ಹಗರಣದಲ್ಲಾದ ಕೋಟ್ಯಾಂತರ ರೂಪಾಯಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಹೇಳಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಈಗಲಾದರೂ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕು ಎಂದು ಆಗ್ರಹಿಸಿದರು.

ಅರ್ಚನ ಎಸ್‌ ಎಸ್

Recent Posts

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

9 mins ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

43 mins ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

1 hour ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

17 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

20 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

20 hours ago