Municipal corporation employees' protest
ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರು ಕೆಲಸ ಬಹಿಷ್ಕರಿಸಿ ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ.
ಮೈಸೂರು ಪಾಲಿಕೆ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಪಾಲಿಕೆ ನೌಕರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಹಾಗೂ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ನೌಕರರು, ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ಕರೆ ನೀಡಿರುವ ಹಿನ್ನೆಲೆಯಲ್ಲಿ ನಾವೆಲ್ಲಾ ಕೆಲಸ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ರಾಜ್ಯ ಸರ್ಕಾರಿ ನೌಕರರಿಗೆ ಸಿಗುವ ಸವಲತ್ತುಗಳು ಸ್ಥಳೀಯ ಸಂಸ್ಥೆ ನೌಕರರಿಗೂ ದೊರೆಯಬೇಕು. 7ನೇ ವೇತನ ಆಯೋಗದ ಸೌಲಭ್ಯವನ್ನು ಪಾಲಿಕೆ ನೌಕರರಿಗೂ ವಿಸ್ತರಿಸಬೇಕು. ವೇತನದ ಶೇಕಡಾ.100ರಷ್ಟು ಅನುದಾನವನ್ನು ರಾಜ್ಯ ಹಣಕಾಸು ಆಯೋಗದಿಂದಲೇ ಬಿಡುಗಡೆ ಮಾಡಬೇಕು. ಪಾಲಿಕೆ ನೌಕರರ ನೇಮಕಾತಿ ನಿಯಮಗಳು ತಿದ್ದುಪಡಿಯಾಗಬೇಕು. ರಾಜ್ಯ ಸರ್ಕಾರಿ ನೌಕರರ ದೊರೆಯುವ ಕೆ.ಜಿ.ಐ.ಡಿ, ಜಿಐಎಸ್ ಸೌಲಭ್ಯ, ಜ್ಯೋತಿ ಸಂಜೀವಿನಿ ಯೋಜನೆಯನ್ನು ನಮಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ನಮ್ಮ ಪರಿಷತ್ ವತಿಯಿಂದ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ರೂಪಿಸಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.
ಎಚ್.ಎಸ್.ದಿನೇಶ್ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ…
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…