ಮೈಸೂರು ನಗರ

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆ ಪ್ರಯುಕ್ತ ‘ಮ್ಯೂಸಿಯಮ್ಸ್ ಆನ್ ವೀಲ್ಸ್’ ಶೀರ್ಷಿಕೆಯಡಿ ವಿಶೇಷಚೇತನ ಮಕ್ಕಳಿಗೆ ವಸ್ತು ಸಂಗ್ರಹಾಲಯ ವೀಕ್ಷಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಇರ್ವೀನ್ ರಸ್ತೆಯಲ್ಲಿರುವ ವೆಲ್ಲಿಂಗ್ಟನ್ ಸರ್ಕಾರಿ ವಸ್ತುಸಂಗ್ರಹಾಲಯ ಕಲಾ ಗ್ಯಾಲರಿ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಮಾರಂಭವನ್ನು ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜ್ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಉಸ್ತುವಾರಿ ಅಧಿಕಾರಿ ಅಶೋಕ್‌ವರ್ಧನ್ ಉದ್ಘಾಟಿಸಿದರು.

ವಸ್ತು ಸಂಗ್ರಹಾಲಯದಲ್ಲಿ ಪ್ರಾಚೀನ ಕಾಲದಲ್ಲಿ ಬಳಸಲಾದ ನಾಣ್ಯಗಳು, ಐತಿಹಾಸಿಕ ಛಾಯಾಚಿತ್ರಗಳು, ವಿಜ್ಞಾನ, ತಂತ್ರಜ್ಞಾನದ ಆವಿಷ್ಕಾರಗಳು ಮತ್ತು ದಕ್ಷಿಣ ಭಾರತದ ಪ್ರಖ್ಯಾತ ರಾಜವಂಶಸ್ಥರಾದ ಶಾತವಾಹನರು, ಬಾದಾಮಿಯ ಚಾಲುಕ್ಯರು, ರಾಷ್ಟ್ರಕೂಟರು, ಕಲ್ಯಾಣ ಚಾಲುಕ್ಯರು, ಕಳಚೂರಿಗಳು, ಬಹುಮನಿಗಳು, ಆದಿಲ್ ಷಾಹಿಗಳು ಮತ್ತು ನಿಜಾಮರು ಈ ಪ್ರದೇಶದಲ್ಲಿ ಆಳ್ವಿಕೆ ನಡೆಸಿದ್ದು, ಗತಕಾಲದ ಹಲವಾರು ಸ್ಮಾರಕಗಳು ಹಾಗೂ ಪ್ರಾಚ್ಯ ವಸ್ತುಗಳು ವಿಶೇಷ ಮಕ್ಕಳ ಗಮನಸೆಳೆದವು.

ನಂತರ ವಿಶೇಷಚೇತನರ ಪ್ರವಾಸವೂ ವೆಲ್ಲಿಂಗ್ಟನ್ ಸರ್ಕಾರಿ ವಸ್ತುಸಂಗ್ರಹಾಲಯದಿಂದ ಹೊರಟು ಪಯಣ(ಕಾರ್) ಮ್ಯೂಸಿಯಂ, ಪ್ರಾಕೃತಿಕ ಪ್ರಾದೇಶಿಕ ವಸ್ತುಸಂಗ್ರಹಾಲಯ ಹಾಗೂ ರೈಲ್ವೆ ಮ್ಯೂಸಿಯಂ ಮೂಲಕ ವೆಲ್ಲಿಂಗ್ಟನ್ ಸರ್ಕಾರಿ ವಸ್ತುಸಂಗ್ರಹಾಲಯ ತಲುಪಿತು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

1 hour ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

1 hour ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

2 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

3 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

4 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

4 hours ago