ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆ ಪ್ರಯುಕ್ತ ‘ಮ್ಯೂಸಿಯಮ್ಸ್ ಆನ್ ವೀಲ್ಸ್’ ಶೀರ್ಷಿಕೆಯಡಿ ವಿಶೇಷಚೇತನ ಮಕ್ಕಳಿಗೆ ವಸ್ತು ಸಂಗ್ರಹಾಲಯ ವೀಕ್ಷಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ಇರ್ವೀನ್ ರಸ್ತೆಯಲ್ಲಿರುವ ವೆಲ್ಲಿಂಗ್ಟನ್ ಸರ್ಕಾರಿ ವಸ್ತುಸಂಗ್ರಹಾಲಯ ಕಲಾ ಗ್ಯಾಲರಿ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಮಾರಂಭವನ್ನು ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜ್ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಉಸ್ತುವಾರಿ ಅಧಿಕಾರಿ ಅಶೋಕ್ವರ್ಧನ್ ಉದ್ಘಾಟಿಸಿದರು.
ವಸ್ತು ಸಂಗ್ರಹಾಲಯದಲ್ಲಿ ಪ್ರಾಚೀನ ಕಾಲದಲ್ಲಿ ಬಳಸಲಾದ ನಾಣ್ಯಗಳು, ಐತಿಹಾಸಿಕ ಛಾಯಾಚಿತ್ರಗಳು, ವಿಜ್ಞಾನ, ತಂತ್ರಜ್ಞಾನದ ಆವಿಷ್ಕಾರಗಳು ಮತ್ತು ದಕ್ಷಿಣ ಭಾರತದ ಪ್ರಖ್ಯಾತ ರಾಜವಂಶಸ್ಥರಾದ ಶಾತವಾಹನರು, ಬಾದಾಮಿಯ ಚಾಲುಕ್ಯರು, ರಾಷ್ಟ್ರಕೂಟರು, ಕಲ್ಯಾಣ ಚಾಲುಕ್ಯರು, ಕಳಚೂರಿಗಳು, ಬಹುಮನಿಗಳು, ಆದಿಲ್ ಷಾಹಿಗಳು ಮತ್ತು ನಿಜಾಮರು ಈ ಪ್ರದೇಶದಲ್ಲಿ ಆಳ್ವಿಕೆ ನಡೆಸಿದ್ದು, ಗತಕಾಲದ ಹಲವಾರು ಸ್ಮಾರಕಗಳು ಹಾಗೂ ಪ್ರಾಚ್ಯ ವಸ್ತುಗಳು ವಿಶೇಷ ಮಕ್ಕಳ ಗಮನಸೆಳೆದವು.
ನಂತರ ವಿಶೇಷಚೇತನರ ಪ್ರವಾಸವೂ ವೆಲ್ಲಿಂಗ್ಟನ್ ಸರ್ಕಾರಿ ವಸ್ತುಸಂಗ್ರಹಾಲಯದಿಂದ ಹೊರಟು ಪಯಣ(ಕಾರ್) ಮ್ಯೂಸಿಯಂ, ಪ್ರಾಕೃತಿಕ ಪ್ರಾದೇಶಿಕ ವಸ್ತುಸಂಗ್ರಹಾಲಯ ಹಾಗೂ ರೈಲ್ವೆ ಮ್ಯೂಸಿಯಂ ಮೂಲಕ ವೆಲ್ಲಿಂಗ್ಟನ್ ಸರ್ಕಾರಿ ವಸ್ತುಸಂಗ್ರಹಾಲಯ ತಲುಪಿತು.
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…