ಮೈಸೂರು ನಗರ

ಮಾನಸಿಕ ಆರೋಗ್ಯ ಸಮಸ್ಯೆಗೆ ಸಂಗೀತ ಮದ್ದು : ಡಾ .ರೇಖಾ ಅರುಣ್ ಅಭಿಮತ

ಮೈಸೂರು: ಮಾನಸಿಕ ಸಮಸ್ಯೆಗಳಿಂದ ಮುಕ್ತವಾಗಬೇಕಿದ್ದರೆ ಸಾಹಿತ್ಯ ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು ಡಾ. ರೇಖಾ ಅರುಣ್ ಹೇಳಿದರು.

ಪುರಭವನದಲ್ಲಿ ನಟ ಡಾ. ವಿಷ್ಣುವರ್ಧನ್ ರವರ 74 ನೇ ವರ್ಷದ ಜನ್ಮದಿನದ ಅಂಗವಾಗಿ ಶ್ರೀ ಗಣೇಶ ಮ್ಯೂಸಿಕಲ್ ಗ್ರೂಪ್ಸ್ ವತಿಯಿಂದ ಎ ಕಾಂತರಾಜು ರವರ ಸಾರಥ್ಯದಲ್ಲಿ ಡಾಕ್ಟರ್ ವಿಷ್ಣುವರ್ಧನ್ ಅಭಿನಯದ ಗೀತೆಗಳ ಕರೋಕೆ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಭಿಮಾನಿಗಳ ಅಚ್ಚುಮೆಚ್ಚಿನ ನಟ ಡಾ.ವಿಷ್ಣುವರ್ಧನ್. ಮೇರು ನಟನ ಆದರ್ಶಮಯ ಜೀವನ ಮಾದರಿ. ಸದಾಕಾಲವೂ ಸ್ಥಿತ ಪ್ರಜ್ಞೆ ಹೊಂದಿದ್ದ ಅವರು, ಸಮಾಜವನ್ನು ಆರೋಗ್ಯಕರ ಚಿಂತನೆಗೆ ಹಚ್ಚುವಂತಹ ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಕನ್ನಡದ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು ಜೊತೆಗೆ ಕಳಂಕರಹಿತರಾಗಿ ಬಾಳಿದ ವಿಷ್ಣು ಅವರು ಯುವ ಸಮುದಾಯದ ಬಗ್ಗೆ ಹೆಚ್ಚು ಒಲವು ಬೆಳೆಸಿಕೊಂಡಿದ್ದರು ಎಂದರು.

ಮೇಲುಕೋಟೆ ವಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ ಮಾತನಾಡಿ, ಕನ್ನಡ ನಾಡು–ನುಡಿ ಬಗೆಗೆ ಅಪಾರ ಕಳಕಳಿ ಹೊಂದಿದ್ದ ಡಾ. ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದ ಎಂದು ಶ್ಲಾಘಿಸಿದರು. ಯುವಜನರಲ್ಲಿ ಭಾಷಾಭಿಮಾನ ಮತ್ತು ದೇಶಾಭಿಮಾನ ಮೂಡಿಸುವಂತಹ ಸದಭಿರುಚಿ ಚಿತ್ರಗಳಲ್ಲಿ ನಟಿಸಿ ಜನಮನ್ನಣೆ ಗಳಿಸಿದ್ದ ಅವರ ಜೀವನ ಕಿರಿಯ ನಟರಿಗೆ ಮಾದರಿ ಎಂದರು.

ಈ ಸಂದರ್ಭದಲ್ಲಿ ಹೃದಯ ತಜ್ಞ ಡಾ. ಮಂಜುನಾಥ್, ಖ್ಯಾತ ಮನೋಶಾಸ್ತ್ರಜ್ಞರು ಡಾ|| ರೇಖಾ ಮನಃಶಾಂತಿ, ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ,ಶ್ರೀ ಗಣೇಶ ಮ್ಯೂಸಿಕಲ್ ಗ್ರೂಪ್ಸ್ ಸಂಸ್ಥಾಪಕರಾದ ಎ ಕಾಂತರಾಜು, ಗಾಯಕರಾದ ಬಿ ನವೀನ್ ಕುಮಾರ್, ಜಯಲಕ್ಷ್ಮಿ ನಾಯ್ಡು, ಲಕ್ಷ್ಮಿ, ಗುರುರಾಜ್ ಹಾಗೂ ಇನ್ನಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

8 mins ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

1 hour ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

3 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

4 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

6 hours ago

ನಾಳೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ

ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…

6 hours ago