ಮೈಸೂರು: ನನ್ನ ಕಂಡ್ರೆ ಬಿಜೆಪಿಗೆ ಭಯ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ಬಗ್ಗೆ ಬಿಜೆಪಿಯ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಇಂದು ಮಾತನಾಡಿದ ಅವರು, ಸಿಎಂ ಚೇಂಜ್ ಆಗುತ್ತಾರೆ ಎಂದು ಬಿಜೆಪಿ ನಾಯಕರು ಹೇಳುತ್ತಲೆ ಇರುತ್ತಾರೆ. ಸಿಎಂ ಚೇಂಜ್ ಪ್ರಶ್ನೆಯೆ ಇಲ್ಲ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಿಎಂ ಬದಲಾವಣೆ ಆಗಿಯೆ ಹೋಯ್ತು ಎಂದು ಇಲ್ಲಸಲ್ಲದ ವದಂತಿಗಳನ್ನು ಹಬ್ಬಿಸುತ್ತಾರೆ. ಬದಲಾವಣೇ ಆಗಿದ್ಯಾ? ಎಂದು ಪ್ರಶ್ನಿಸಿದರು.
ಬಿಜೆಪಿ ಸಂಪೂರ್ಣವಾಗಿ ಎರಡು ಭಾಗವಾಗಿದೆ. ಇತ್ತೀಚಿನ ದಿನಗಳಲ್ಲಿ ಅದು ಬಹಿರಂಗವಾಗುತ್ತಿದೆ. ಬಿಜೆಪಿ ನಾಯಕರೇ ಒಬ್ಬರಿಗೊಬ್ಬರು ಏಕವಚನದಲ್ಲಿ ಬೈಯ್ದಾಡುತ್ತಿದ್ದಾರೆ. ಅಶೋಕ್ ಮೊದಲು ಅದನ್ನು ಸರಿ ಮಾಡಲಿ. ಅದನ್ನು ಬಿಟ್ಟು ನಮ್ಮ ಬಗ್ಗೆ ಮಾತನಾಡುತ್ತಾರೆ ಎಂದು ಪ್ರತ್ಯಾರೋಪ ಮಾಡಿದರು.
ಮುಂದುವರಿದು ಮಾತನಾಡುತ್ತಾ, ನಾನು ಗಂಟು ಮೂಟೆ ಕಟ್ಟಿದ್ದೇನೆ ಎಂದು ಬಿಜೆಪಿಯವರು ಬಹಳಷ್ಟು ಬಾರಿ ಭ್ರಷ್ಟಚಾರದ ಅಪಪ್ರಚಾರ ಮಾಡಿದರು. ಆದರೆ ಉಪಚುನಾವಣೆ ಗೆಲ್ಲಲಿಲ್ವಾ? ಜೆಡಿಎಸ್ ಉತ್ತರಾಧಿಕಾರಿ ಹಾಗೂ ಅಧ್ಯಕ್ಷನಾಗಲು ಹೊರಟಿದ್ದವರನ್ನೆ ಅವರ ಕ್ಷೇತ್ರದಲ್ಲಿ ಸೋಲಿಸಿದ್ದೇವೆ. ಇದು ನಮಗೆ ಜನರು ಮಾಡುತ್ತಿರುವ ಆಶೀರ್ವಾದ. ಮುಂದೆನೂ ಕಾಂಗ್ರೆಸ್ ಪರವಾದ ಅಲೆ ಇರುತ್ತದೆ ಎಂದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…