ಮೈಸೂರು: ನನ್ನ ಕಂಡ್ರೆ ಬಿಜೆಪಿಗೆ ಭಯ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ಬಗ್ಗೆ ಬಿಜೆಪಿಯ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಇಂದು ಮಾತನಾಡಿದ ಅವರು, ಸಿಎಂ ಚೇಂಜ್ ಆಗುತ್ತಾರೆ ಎಂದು ಬಿಜೆಪಿ ನಾಯಕರು ಹೇಳುತ್ತಲೆ ಇರುತ್ತಾರೆ. ಸಿಎಂ ಚೇಂಜ್ ಪ್ರಶ್ನೆಯೆ ಇಲ್ಲ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಿಎಂ ಬದಲಾವಣೆ ಆಗಿಯೆ ಹೋಯ್ತು ಎಂದು ಇಲ್ಲಸಲ್ಲದ ವದಂತಿಗಳನ್ನು ಹಬ್ಬಿಸುತ್ತಾರೆ. ಬದಲಾವಣೇ ಆಗಿದ್ಯಾ? ಎಂದು ಪ್ರಶ್ನಿಸಿದರು.
ಬಿಜೆಪಿ ಸಂಪೂರ್ಣವಾಗಿ ಎರಡು ಭಾಗವಾಗಿದೆ. ಇತ್ತೀಚಿನ ದಿನಗಳಲ್ಲಿ ಅದು ಬಹಿರಂಗವಾಗುತ್ತಿದೆ. ಬಿಜೆಪಿ ನಾಯಕರೇ ಒಬ್ಬರಿಗೊಬ್ಬರು ಏಕವಚನದಲ್ಲಿ ಬೈಯ್ದಾಡುತ್ತಿದ್ದಾರೆ. ಅಶೋಕ್ ಮೊದಲು ಅದನ್ನು ಸರಿ ಮಾಡಲಿ. ಅದನ್ನು ಬಿಟ್ಟು ನಮ್ಮ ಬಗ್ಗೆ ಮಾತನಾಡುತ್ತಾರೆ ಎಂದು ಪ್ರತ್ಯಾರೋಪ ಮಾಡಿದರು.
ಮುಂದುವರಿದು ಮಾತನಾಡುತ್ತಾ, ನಾನು ಗಂಟು ಮೂಟೆ ಕಟ್ಟಿದ್ದೇನೆ ಎಂದು ಬಿಜೆಪಿಯವರು ಬಹಳಷ್ಟು ಬಾರಿ ಭ್ರಷ್ಟಚಾರದ ಅಪಪ್ರಚಾರ ಮಾಡಿದರು. ಆದರೆ ಉಪಚುನಾವಣೆ ಗೆಲ್ಲಲಿಲ್ವಾ? ಜೆಡಿಎಸ್ ಉತ್ತರಾಧಿಕಾರಿ ಹಾಗೂ ಅಧ್ಯಕ್ಷನಾಗಲು ಹೊರಟಿದ್ದವರನ್ನೆ ಅವರ ಕ್ಷೇತ್ರದಲ್ಲಿ ಸೋಲಿಸಿದ್ದೇವೆ. ಇದು ನಮಗೆ ಜನರು ಮಾಡುತ್ತಿರುವ ಆಶೀರ್ವಾದ. ಮುಂದೆನೂ ಕಾಂಗ್ರೆಸ್ ಪರವಾದ ಅಲೆ ಇರುತ್ತದೆ ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…
ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…
ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್…
ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರು ಆರ್.ಅಶೋಕ್ ನೇತೃತ್ವದಲ್ಲಿ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…