ವಕ್ಫ್‌ ವಿರುದ್ಧ ನನ್ನ ಹೋರಾಟ ನಿಲ್ಲಲ್ಲ: ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ

ಮೈಸೂರು: ನನಗೆ ಅಧಿಕಾರ ಇರಲಿ ಬಿಡಲಿ ಜನರ ಪರವಾಗಿ ಹೋರಾಟ ಮಾಡುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಕ್ಫ್ ವಿವಾದದ ವಿರುದ್ಧದ ಹೋರಾಟದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೆಸರು ಕೈ ಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ನನಗೆ ಯಾವುದೇ ಬಣ ಇಲ್ಲ. ನಾನೊಬ್ಬ ಬಿಜೆಪಿ ಕಾರ್ಯಕರ್ತ. ನನಗೆ ಅಧಿಕಾರ ಇರಲಿ ಬಿಡಲಿ ಜನರ ಪರವಾಗಿ ಹೋರಾಟ ಮಾಡುತ್ತೇನೆ. ಅಧಿಕಾರದಲ್ಲಿ ಇದ್ದಾಗಲೂ ಅನೇಕ ಹೋರಾಟ ಮಾಡಿದ್ದೇನೆ. ಈಗಲೂ ನನ್ನ ಹೋರಾಟ ಮುಂದುವರೆಸುತ್ತೇನೆ. ವಕ್ಫ್ ವಿರುದ್ಧವಷ್ಟೇ ನನ್ನ ಹೋರಾಟ. ಮೋದಿಯೂ ಬಿಜೆಪಿ ಕಾರ್ಯಕರ್ತ, ನಾನು ಕೂಡ ಬಿಜೆಪಿ ಕಾರ್ಯಕರ್ತ. ನಾನು ಜನರ ಕೆಲಸ ಮಾಡಲಿಕ್ಕೆ ಬಂದಿರುವವನು. ಜನರು ತಮ್ಮ ಮನಸ್ಸಿನಲ್ಲಿ ನನಗೆ ಸ್ಥಾನ ಕೊಟ್ಟಿದ್ದಾರೆ, ನನಗೆ ಇಷ್ಟು ಸಾಕು ಎಂದರು.

ಇನ್ನು ವಕ್ಫ್ ಭೂ ಕಬಳಿಕೆ ವಿಚಾರಕ್ಕೆ ರಾಜ್ಯದಲ್ಲಿ ಹೋರಾಟ ಶುರುವಾಗಿದೆ. ರೈತರು ತೀವ್ರ ಕಂಗಾಲಾಗಿದ್ದಾರೆ. ಯಾವಾಗ ಭೂ ಕಬಳಿಕೆ ಆಗಿದೆ ಅನ್ನೋದು ಗೊತ್ತಾಗದಾಗಿದೆ. ರೈತರು, ಮಠಗಳು ಹಲವರ ಆಸ್ತಿಗಳು ವಕ್ಫ್ ಆಸ್ತಿಗಳಾಗಿ ಬದಲಾಗುತ್ತಿವೆ. ಸಿದ್ದರಾಮಯ್ಯನವರ ಆಡಳಿತದಲ್ಲಿ ಬಹುಸಂಖ್ಯಾತ ಹಿಂದುಗಳಿಗೆ ಆತಂಕ ಎದುರಾಗಿದೆ. ಹಿಂದುಗಳು, ರೈತರ ಭೂಮಿಗೆ ಕಂಟಕವಾಗಿದೆ ಎಂದು ಸಿಎಂ ಸಿದ್ದರಾಮಯ್ಯರ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಮಂತ್ರಾಲಯಕ್ಕೂ ನಾವೇ ಭೂಮಿ ದಾನ ಕೊಟ್ಟಿದ್ದು ಎಂಬ ಇಬ್ರಾಹಿಂ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮಗೆ ಭೂಮಿ ದಾನ ಮಾಡಲಿಕ್ಕೆ ನಿಮಗೆಲ್ಲಿಂದ ಭೂಮಿ ಬಂತು. ಇಸ್ಲಾಂ ಧರ್ಮ ಹುಟ್ಟಿದ್ದು ಮರುಭೂಮಿಯಲ್ಲಿ. ನಾವು ಮುಸ್ಲಿಮರಿಗೆ ಆಶ್ರಯ ಕೊಟ್ಟಿರುವುದು. ಮಹಮ್ಮದ್ ಘಜಿನಿ, ಬಾಬರ್ ಎಲ್ಲರೂ ಭಾರತಕ್ಕೆ ಬಂದು ಭೂಮಿ ವಶಪಡಿಸಿಕೊಂಡರು. ಅದಾದ ನಂತರ ನಾವು ಕೂಡ ನಮ್ಮ ಭೂಮಿಯನ್ನು ಹೋರಾಟ ಮಾಡಿ ಉಳಿಸಿಕೊಂಡಿದ್ದೇವೆ ಎಂದು ಕಿಡಿಕಾರಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮದ್ದೂರು| ಚಿಕ್ಕದೊಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ.…

9 mins ago

ನಂದಿನಿ ಉತ್ಪನ್ನಗಳ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ: ಕೆಎಂಎಫ್‌

ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್‌ ಆಗುತ್ತಿವೆ.…

26 mins ago

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?…

37 mins ago

ಫೆಬ್ರವರಿ.20ರಂದು ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

40 mins ago

ಫೆ.28ರಿಂದ ದ್ವಿತೀಯ ಪಿಯುಸಿ, ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ…

49 mins ago

ಕುಶಾಲನಗರ| ಲಂಚ ಪಡೆಯುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್‌ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು,…

53 mins ago