ವಕ್ಫ್‌ ವಿರುದ್ಧ ನನ್ನ ಹೋರಾಟ ನಿಲ್ಲಲ್ಲ: ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ

ಮೈಸೂರು: ನನಗೆ ಅಧಿಕಾರ ಇರಲಿ ಬಿಡಲಿ ಜನರ ಪರವಾಗಿ ಹೋರಾಟ ಮಾಡುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಕ್ಫ್ ವಿವಾದದ ವಿರುದ್ಧದ ಹೋರಾಟದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೆಸರು ಕೈ ಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ನನಗೆ ಯಾವುದೇ ಬಣ ಇಲ್ಲ. ನಾನೊಬ್ಬ ಬಿಜೆಪಿ ಕಾರ್ಯಕರ್ತ. ನನಗೆ ಅಧಿಕಾರ ಇರಲಿ ಬಿಡಲಿ ಜನರ ಪರವಾಗಿ ಹೋರಾಟ ಮಾಡುತ್ತೇನೆ. ಅಧಿಕಾರದಲ್ಲಿ ಇದ್ದಾಗಲೂ ಅನೇಕ ಹೋರಾಟ ಮಾಡಿದ್ದೇನೆ. ಈಗಲೂ ನನ್ನ ಹೋರಾಟ ಮುಂದುವರೆಸುತ್ತೇನೆ. ವಕ್ಫ್ ವಿರುದ್ಧವಷ್ಟೇ ನನ್ನ ಹೋರಾಟ. ಮೋದಿಯೂ ಬಿಜೆಪಿ ಕಾರ್ಯಕರ್ತ, ನಾನು ಕೂಡ ಬಿಜೆಪಿ ಕಾರ್ಯಕರ್ತ. ನಾನು ಜನರ ಕೆಲಸ ಮಾಡಲಿಕ್ಕೆ ಬಂದಿರುವವನು. ಜನರು ತಮ್ಮ ಮನಸ್ಸಿನಲ್ಲಿ ನನಗೆ ಸ್ಥಾನ ಕೊಟ್ಟಿದ್ದಾರೆ, ನನಗೆ ಇಷ್ಟು ಸಾಕು ಎಂದರು.

ಇನ್ನು ವಕ್ಫ್ ಭೂ ಕಬಳಿಕೆ ವಿಚಾರಕ್ಕೆ ರಾಜ್ಯದಲ್ಲಿ ಹೋರಾಟ ಶುರುವಾಗಿದೆ. ರೈತರು ತೀವ್ರ ಕಂಗಾಲಾಗಿದ್ದಾರೆ. ಯಾವಾಗ ಭೂ ಕಬಳಿಕೆ ಆಗಿದೆ ಅನ್ನೋದು ಗೊತ್ತಾಗದಾಗಿದೆ. ರೈತರು, ಮಠಗಳು ಹಲವರ ಆಸ್ತಿಗಳು ವಕ್ಫ್ ಆಸ್ತಿಗಳಾಗಿ ಬದಲಾಗುತ್ತಿವೆ. ಸಿದ್ದರಾಮಯ್ಯನವರ ಆಡಳಿತದಲ್ಲಿ ಬಹುಸಂಖ್ಯಾತ ಹಿಂದುಗಳಿಗೆ ಆತಂಕ ಎದುರಾಗಿದೆ. ಹಿಂದುಗಳು, ರೈತರ ಭೂಮಿಗೆ ಕಂಟಕವಾಗಿದೆ ಎಂದು ಸಿಎಂ ಸಿದ್ದರಾಮಯ್ಯರ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಮಂತ್ರಾಲಯಕ್ಕೂ ನಾವೇ ಭೂಮಿ ದಾನ ಕೊಟ್ಟಿದ್ದು ಎಂಬ ಇಬ್ರಾಹಿಂ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮಗೆ ಭೂಮಿ ದಾನ ಮಾಡಲಿಕ್ಕೆ ನಿಮಗೆಲ್ಲಿಂದ ಭೂಮಿ ಬಂತು. ಇಸ್ಲಾಂ ಧರ್ಮ ಹುಟ್ಟಿದ್ದು ಮರುಭೂಮಿಯಲ್ಲಿ. ನಾವು ಮುಸ್ಲಿಮರಿಗೆ ಆಶ್ರಯ ಕೊಟ್ಟಿರುವುದು. ಮಹಮ್ಮದ್ ಘಜಿನಿ, ಬಾಬರ್ ಎಲ್ಲರೂ ಭಾರತಕ್ಕೆ ಬಂದು ಭೂಮಿ ವಶಪಡಿಸಿಕೊಂಡರು. ಅದಾದ ನಂತರ ನಾವು ಕೂಡ ನಮ್ಮ ಭೂಮಿಯನ್ನು ಹೋರಾಟ ಮಾಡಿ ಉಳಿಸಿಕೊಂಡಿದ್ದೇವೆ ಎಂದು ಕಿಡಿಕಾರಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

1 hour ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

1 hour ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

1 hour ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

2 hours ago