ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ
ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದ್ದು, ಲೋಕ ಕಲ್ಯಾಣದೊಂದಿಗೆ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ವಿಜಯನಗರದ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳನ್ನು ತಯಾರಿಸಲಾಗುತ್ತಿದೆ.
ಜ.1ರಂದು ದೇವಸ್ಥಾನಕ್ಕೆ ಬರುವ ಭಕ್ತರಿಗೆ ಲಡ್ಡುಗಳನ್ನು ವಿತರಿಸಲಾಗುತ್ತಿದ್ದು, ಅದಕ್ಕಾಗಿ ತಿರುಪತಿ ಮಾದರಿಯ 1 ಲಕ್ಷ ಲಡ್ಡುಗಳು ಸಿದ್ಧವಾಗುತ್ತಿವೆ. ಅಂದು ಮುಂಜಾನೆ 4 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಭಕ್ತಾದಿಗಳಿಗೆ ಲಡ್ಡುಗಳನ್ನು ವಿತರಿಸಲಾಗುವುದು ಎಂದು ಯೋಗಾನರಸಿಂಹಸ್ವಾಮಿ ದೇಗುಲದ ಸಂಸ್ಥಾಪಕ ಪ್ರೊ.ಭಾಷ್ಯಂ ಸ್ವಾಮೀಜಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
1994ರಿಂದ ಲಡ್ಡು ವಿತರಿಸುವ ಕಾರ್ಯವನ್ನು ನಡೆಸಿಕೊಂಡು ಬರಲಾಗಿದ್ದು, ಹೊಸ ವರ್ಷದಂದು ಶ್ರೀ ಯೋಗಾನರಸಿಂಹಸ್ವಾಮಿಯವರಿಗೆ ವಿಶೇಷ ಅಲಂಕಾರ ಮತ್ತು ಶ್ರೀರಂಗ, ಮಧುರೈ ಕ್ಷೇತ್ರದಿಂದ ತರಿಸಿರುವ ವಿಶೇಷ ತೋಮಾಲೆ ಮತ್ತು ಸ್ವರ್ಣಪುಷ್ಪದಿಂದ ಶ್ರೀಸ್ವಾಮಿಗೆ ಸಹಸ್ರನಾಮಾರ್ಚನೆ ಮತ್ತು ದೇವಾಲಯದ ಉತ್ಸವ ಮೂರ್ತಿಯಾದ ರಂಗನಾಥಸ್ವಾಮಿಗೆ ದೇವಾಲಯದ ಆವರಣದಲ್ಲಿ ಏಕಾದಶ ಪ್ರಾಕಾರೋತ್ಸವ ಹಾಗೂ 50 ಕ್ವಿಂಟಾಲ್ ಪುಳಿಯೊಗರೆ ನಿವೇದನೆ ಮಾಡಲಾಗುತ್ತಿದ್ದು, ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಇದನ್ನು ಓದಿ: ರೈಲು ಪ್ರಯಾಣ ದರ ಹೆಚ್ಚಳ | ರಾಜ್ಯ ಬಿಜೆಪಿ ನಾಯಕರ ಮೌನವೇಕೆ : ಸಿ.ಎಂ ಪ್ರಶ್ನೆ
ತಿರುಪತಿ ಮಾದರಿಯ 2 ಲಕ್ಷ ಲಡ್ಡು:
ದೇವಸ್ಥಾನದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಮಾತನಾಡಿ, ಈ ವರ್ಷ ಅಂದಾಜು ೨ ಕೆಜಿ ತೂಕದ ೧೦ ಸಾವಿರ ಲಡ್ಡುಗಳು ಹಾಗೂ ೧೫೦ ಗ್ರಾಂ ತೂಕದ ೨ ಲಕ್ಷ ಲಡ್ಡುಗಳನ್ನು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾದಿಗಳಿಗೆ ಯಾವುದೇ ಜಾತಿ, ಮತ ಭೇದವಿಲ್ಲದೆ ಉಚಿತವಾಗಿ ವಿತರಿಸಲಾಗುವುದು. ಲಡ್ಡು ಪ್ರಸಾದವನ್ನು ವಿಶೇಷವಾಗಿ ೧೦೦ ಮಂದಿ ನುರಿತ ಬಾಣಸಿಗರಿಂದ ತಯಾರಿಸಲಾಗಿದ್ದು, ಡಿ.೨೦ರಿಂದ ಪ್ರಾರಂಭಿಸಿ ೩೧ರವರೆಗೂ ಲಡ್ಡು ತಯಾರಿ ಕಾರ್ಯ ನಡೆಯಲಿದೆ ಎಂದರು.
ಲಡ್ಡು ತಯಾರಿಕೆಗೆ ಬಳಸಿರುವ ಸಾಮಾಗ್ರಿಗಳು
ಲಡ್ಡು ತಯಾರಿಕೆಗೆ ೧೦೦ ಕ್ವಿಂಟಾಲ್ ಕಡ್ಲೆಹಿಟ್ಟು, ೨೦೦ ಕಿಂಟಾಲ್ ಸಕ್ಕರೆ, ೧೦ ಸಾವಿರ ಲೀಟರ್ ಖಾದ್ಯ ತೈಲ, ೫೦೦ ಕೆಜಿ ಗೋಡಂಬಿ, ೫೦೦ ಕೆಜಿ ಒಣದ್ರಾಕ್ಷಿ, ೨೫೦ ಕೆಜಿ ಬಾದಾಮಿ, ೧ ಸಾವಿರ ಕೆಜಿ ಡೈಮಂಡ್ ಸಕ್ಕರೆ, ೨ ಸಾವಿರ ಕೆಜಿ ಬೂರಾ ಸಕ್ಕರೆ, ೫೦ ಕೆಜಿ ಪಿಸ್ತಾ, ೫೦ ಕೆಜಿ ಏಲಕ್ಕಿ, ೫೦ ಕೆಜಿ ಜಾಕಾಯಿ ಮತ್ತು ಜಾಪತ್ರೆ, ೫೦ ಕೆಜಿ ಪಚ್ಚೆ ಕರ್ಪೂರ, ೨೦೦ ಕೆಜಿ ಲವಂಗಗಳನ್ನು ಬಳಸಿ ತಯಾರಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಡಾ.ರಾಜ್ಕುಮಾರ್ ಪುತ್ರಿ ಲಕ್ಷ್ಮಿ, ಅಳಿಯ ಗೋವಿಂದರಾಜು ಸೇರಿದಂತೆ ಹಲವರು ಹಾಜರಿದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…