Mysore
20
scattered clouds

Social Media

ಸೋಮವಾರ, 12 ಜನವರಿ 2026
Light
Dark

ಮೈಸೂರು: ಜಿಲ್ಲೆಯಲ್ಲಿ 55 ಸಾವಿರ ಜನರಿಂದ ಬೃಹತ್ ಮಾನವ ಸರಪಳಿ

ಮೈಸೂರು: ಸೆಪ್ಟೆಂಬರ್ 15ರಂದು  ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಅಂಗವಾಗಿ ಬೃಹತ್ ಮಾನವ ಸರಪಳಿಯನ್ನು ಏರ್ಪಡಿಸುತ್ತಿದೆ.

ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ ಸಮಾನತೆ, ಭ್ರಾತೃತ್ವ ಮತ್ತು ಸ್ವಾತಂತ್ರ್ಯಕ್ಕೆ ಜಯವಾಗಲಿದೆ.  ರಾಜ್ಯಾದ್ಯಂತ ಸುಮಾರು 25 ಲಕ್ಷ ಜನರನ್ನು ಉಪಯೋಗಿಸಿ ಕೊಂಡು ಸುಮಾರು 2500 ಕಿಲೋಮೀಟರ್ ಉದ್ದದ ಮಾನವ ಸರಪಳಿಯನ್ನು ರಚಿಸಲಾಗುತ್ತಿದೆ.

ಮೈಸೂರು ಜಿಲ್ಲೆಯಲ್ಲಿಯೂ ಈ ಮಾನವ ಸರಪಳಿ ರಚನೆಗೊಳ್ಳುತ್ತಿದ್ದು ಮೈಸೂರು ಜಿಲ್ಲೆಯ ಗಡಿ ಭಾಗದ ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಿಂದ ಪ್ರಾರಂಭವಾಗಿ ಟಿ.ನರಸಿಪುರ ತಾಲೂಕಿನ ಮೂಗೂರು ಗ್ರಾಮದ ಚಾಮರಾಜನಗರ ಜಿಲ್ಲೆಯ ಗಡಿಯನ್ನು ಕೊನೆಗೊಳ್ಳುತ್ತದೆ.

ಜಿಲ್ಲೆಯಲ್ಲಿ 58 ಕಿಮೀ ಮಾನವ ಸರಪಳಿ

ಜಿಲ್ಲೆಗೆ ಸಂಬಂಧಿಸಿದಂತೆ ಈ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಸುಮಾರು 55,000 ಜನರು ಒಳಗೊಂಡು 58ಕಿ.ಮೀ ಮಾನವ ಸರಪಳಿ ರಚನೆಯಲ್ಲಿ ಜಿಲ್ಲೆಯ ಎಲ್ಲಾ ಎಲ್ಲ ಸಂಘಟನೆ ಪದಾಧಿಕಾರಿಗಳು ಜನಪ್ರತಿನಿಧಿಗಳು ಸಮುದಾಯದ ಮುಖಂಡರುಗಳು ಶಾಲೆ- ಕಾಲೇಜು ವಿದ್ಯಾರ್ಥಿಗಳು ಮಾನವ ಸರಪಳಿಯಲ್ಲಿ ಭಾಗವಹಿಸಲಾಗುತ್ತಿದೆ.

ಕಾರ್ಯಕ್ರಮವ ಪಟ್ಟಿ ಹೀಗಿದೆ..

ವೇದಿಕೆ ಕಾರ್ಯಕ್ರಮ ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಆಯೋಜಿಸಲಾಗಿದೆ.

ಬೆಳಿಗ್ಗೆ 9,30 ರಿಂದ 9,37 ರವರಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲುವುದು.

9,37 ರಿಂದ 9,40 ರವರಗೆ ನಾಡಗೀತೆ

9,40 ರಿಂದ 9,55 ರವರಗೆ ಮುಖ್ಯ ಅತಿಥಿಗಳಿಂದ ಭಾಷಣ

9,55 ರಿಂದ 9,57 ರವರಗೆ ಸಂವಿಧಾನದ ಪ್ರಸ್ತಾವನೆ ಓದುವುದು

9,57 ರಿಂದ 9,59 ಮಾನವ ಸರಪಳಿಯಲ್ಲಿ ಕೈ, ಕೈ ಹಿಡಿದು ನಿಲ್ಲುವುದು

10 ಗಂಟೆಗೆ ಮಾನವ ಸರಪಳಿಯಲ್ಲಿಯೇ ತಮ್ಮ ಎರಡೂ ಕೈಗಳನ್ನು ಮೇಲೆತ್ತಿ ಜೈಹಿಂದ್, ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿಯನ್ನು ಕಳಚುವುದು.

ಮಾನವ ಸರಪಳಿ ಮಾರ್ಗ 

ಮೈಸೂರು ತಾಲೂಕಿನ ಕಳಸ್ತವಾಡಿ ಸಿದ್ದಲಿಂಗ ಪುರದಿಂದ ಪ್ರಾರಂಭವಾಗಿ ಮಣಿಪಾಲ್ ಆಸ್ಪತ್ರೆ, ಪೌಂಟನ್ ಸರ್ಕಲ್, ಗಾಂಧಿ ನಗರದ ಅಂಬೇಡ್ಕರ್ ವೃತ್ತ, ಟೌನ್ಹಾಲ್, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, ಹಾರ್ಡಿಂಜ್ ಸರ್ಕಲ್, ಮೃಗಾಲಯ, ರೇಸ್ ಕೋರ್ಸ್ ಸರ್ಕಲ್, ಪೊಲೀಸ್ ಭವನ, ಸಂಗೊಳ್ಳಿ ರಾಯಣ್ಣ ಸರ್ಕಲ್, ಕಮಾನ್ ಗೇಟ್, ರಿಂಗ್ ರಸ್ತೆ, ವರುಣ ಗ್ರಾಮ, ಕೀಳನ ಪುರ, ಕೆಂಪಯ್ಯನ ಹುಂಡಿ, ಇಂಡುವಾಳು, ಗರ್ಗೇಶ್ವರಿ, ತಿ.ನರಸೀಪುರ ಟೌನ್, ಗಂಜಾಂ ನರಸಿಂಹ ಸ್ವಾಮಿ ದೇವಸ್ಥಾನ, ಅಲಗೂಡು, ಕುರಬೂರು, ಮಾಡ್ರಳ್ಳಿ ಗೇಟ್, ಮೂಗೂರು ಗ್ರಾಮದ ಮೂಲಕ ಚಾಮರಾಜ ನಗರ ಜಿಲ್ಲೆಯ ಗಡಿ ಪ್ರವೇಶಿಸಲಿದೆ.

Tags:
error: Content is protected !!