ಮೈಸೂರು ನಗರ

ಮೈಸೂರು: ಜಿಲ್ಲೆಯಲ್ಲಿ 55 ಸಾವಿರ ಜನರಿಂದ ಬೃಹತ್ ಮಾನವ ಸರಪಳಿ

ಮೈಸೂರು: ಸೆಪ್ಟೆಂಬರ್ 15ರಂದು  ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಅಂಗವಾಗಿ ಬೃಹತ್ ಮಾನವ ಸರಪಳಿಯನ್ನು ಏರ್ಪಡಿಸುತ್ತಿದೆ.

ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ ಸಮಾನತೆ, ಭ್ರಾತೃತ್ವ ಮತ್ತು ಸ್ವಾತಂತ್ರ್ಯಕ್ಕೆ ಜಯವಾಗಲಿದೆ.  ರಾಜ್ಯಾದ್ಯಂತ ಸುಮಾರು 25 ಲಕ್ಷ ಜನರನ್ನು ಉಪಯೋಗಿಸಿ ಕೊಂಡು ಸುಮಾರು 2500 ಕಿಲೋಮೀಟರ್ ಉದ್ದದ ಮಾನವ ಸರಪಳಿಯನ್ನು ರಚಿಸಲಾಗುತ್ತಿದೆ.

ಮೈಸೂರು ಜಿಲ್ಲೆಯಲ್ಲಿಯೂ ಈ ಮಾನವ ಸರಪಳಿ ರಚನೆಗೊಳ್ಳುತ್ತಿದ್ದು ಮೈಸೂರು ಜಿಲ್ಲೆಯ ಗಡಿ ಭಾಗದ ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಿಂದ ಪ್ರಾರಂಭವಾಗಿ ಟಿ.ನರಸಿಪುರ ತಾಲೂಕಿನ ಮೂಗೂರು ಗ್ರಾಮದ ಚಾಮರಾಜನಗರ ಜಿಲ್ಲೆಯ ಗಡಿಯನ್ನು ಕೊನೆಗೊಳ್ಳುತ್ತದೆ.

ಜಿಲ್ಲೆಯಲ್ಲಿ 58 ಕಿಮೀ ಮಾನವ ಸರಪಳಿ

ಜಿಲ್ಲೆಗೆ ಸಂಬಂಧಿಸಿದಂತೆ ಈ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಸುಮಾರು 55,000 ಜನರು ಒಳಗೊಂಡು 58ಕಿ.ಮೀ ಮಾನವ ಸರಪಳಿ ರಚನೆಯಲ್ಲಿ ಜಿಲ್ಲೆಯ ಎಲ್ಲಾ ಎಲ್ಲ ಸಂಘಟನೆ ಪದಾಧಿಕಾರಿಗಳು ಜನಪ್ರತಿನಿಧಿಗಳು ಸಮುದಾಯದ ಮುಖಂಡರುಗಳು ಶಾಲೆ- ಕಾಲೇಜು ವಿದ್ಯಾರ್ಥಿಗಳು ಮಾನವ ಸರಪಳಿಯಲ್ಲಿ ಭಾಗವಹಿಸಲಾಗುತ್ತಿದೆ.

ಕಾರ್ಯಕ್ರಮವ ಪಟ್ಟಿ ಹೀಗಿದೆ..

ವೇದಿಕೆ ಕಾರ್ಯಕ್ರಮ ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಆಯೋಜಿಸಲಾಗಿದೆ.

ಬೆಳಿಗ್ಗೆ 9,30 ರಿಂದ 9,37 ರವರಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲುವುದು.

9,37 ರಿಂದ 9,40 ರವರಗೆ ನಾಡಗೀತೆ

9,40 ರಿಂದ 9,55 ರವರಗೆ ಮುಖ್ಯ ಅತಿಥಿಗಳಿಂದ ಭಾಷಣ

9,55 ರಿಂದ 9,57 ರವರಗೆ ಸಂವಿಧಾನದ ಪ್ರಸ್ತಾವನೆ ಓದುವುದು

9,57 ರಿಂದ 9,59 ಮಾನವ ಸರಪಳಿಯಲ್ಲಿ ಕೈ, ಕೈ ಹಿಡಿದು ನಿಲ್ಲುವುದು

10 ಗಂಟೆಗೆ ಮಾನವ ಸರಪಳಿಯಲ್ಲಿಯೇ ತಮ್ಮ ಎರಡೂ ಕೈಗಳನ್ನು ಮೇಲೆತ್ತಿ ಜೈಹಿಂದ್, ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿಯನ್ನು ಕಳಚುವುದು.

ಮಾನವ ಸರಪಳಿ ಮಾರ್ಗ 

ಮೈಸೂರು ತಾಲೂಕಿನ ಕಳಸ್ತವಾಡಿ ಸಿದ್ದಲಿಂಗ ಪುರದಿಂದ ಪ್ರಾರಂಭವಾಗಿ ಮಣಿಪಾಲ್ ಆಸ್ಪತ್ರೆ, ಪೌಂಟನ್ ಸರ್ಕಲ್, ಗಾಂಧಿ ನಗರದ ಅಂಬೇಡ್ಕರ್ ವೃತ್ತ, ಟೌನ್ಹಾಲ್, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, ಹಾರ್ಡಿಂಜ್ ಸರ್ಕಲ್, ಮೃಗಾಲಯ, ರೇಸ್ ಕೋರ್ಸ್ ಸರ್ಕಲ್, ಪೊಲೀಸ್ ಭವನ, ಸಂಗೊಳ್ಳಿ ರಾಯಣ್ಣ ಸರ್ಕಲ್, ಕಮಾನ್ ಗೇಟ್, ರಿಂಗ್ ರಸ್ತೆ, ವರುಣ ಗ್ರಾಮ, ಕೀಳನ ಪುರ, ಕೆಂಪಯ್ಯನ ಹುಂಡಿ, ಇಂಡುವಾಳು, ಗರ್ಗೇಶ್ವರಿ, ತಿ.ನರಸೀಪುರ ಟೌನ್, ಗಂಜಾಂ ನರಸಿಂಹ ಸ್ವಾಮಿ ದೇವಸ್ಥಾನ, ಅಲಗೂಡು, ಕುರಬೂರು, ಮಾಡ್ರಳ್ಳಿ ಗೇಟ್, ಮೂಗೂರು ಗ್ರಾಮದ ಮೂಲಕ ಚಾಮರಾಜ ನಗರ ಜಿಲ್ಲೆಯ ಗಡಿ ಪ್ರವೇಶಿಸಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

11 mins ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

18 mins ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

1 hour ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

4 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

4 hours ago