ಮೈಸೂರು ನಗರ

ಮೈಸೂರು: ಜಿಲ್ಲೆಯಲ್ಲಿ 55 ಸಾವಿರ ಜನರಿಂದ ಬೃಹತ್ ಮಾನವ ಸರಪಳಿ

ಮೈಸೂರು: ಸೆಪ್ಟೆಂಬರ್ 15ರಂದು  ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಅಂಗವಾಗಿ ಬೃಹತ್ ಮಾನವ ಸರಪಳಿಯನ್ನು ಏರ್ಪಡಿಸುತ್ತಿದೆ.

ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ ಸಮಾನತೆ, ಭ್ರಾತೃತ್ವ ಮತ್ತು ಸ್ವಾತಂತ್ರ್ಯಕ್ಕೆ ಜಯವಾಗಲಿದೆ.  ರಾಜ್ಯಾದ್ಯಂತ ಸುಮಾರು 25 ಲಕ್ಷ ಜನರನ್ನು ಉಪಯೋಗಿಸಿ ಕೊಂಡು ಸುಮಾರು 2500 ಕಿಲೋಮೀಟರ್ ಉದ್ದದ ಮಾನವ ಸರಪಳಿಯನ್ನು ರಚಿಸಲಾಗುತ್ತಿದೆ.

ಮೈಸೂರು ಜಿಲ್ಲೆಯಲ್ಲಿಯೂ ಈ ಮಾನವ ಸರಪಳಿ ರಚನೆಗೊಳ್ಳುತ್ತಿದ್ದು ಮೈಸೂರು ಜಿಲ್ಲೆಯ ಗಡಿ ಭಾಗದ ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಿಂದ ಪ್ರಾರಂಭವಾಗಿ ಟಿ.ನರಸಿಪುರ ತಾಲೂಕಿನ ಮೂಗೂರು ಗ್ರಾಮದ ಚಾಮರಾಜನಗರ ಜಿಲ್ಲೆಯ ಗಡಿಯನ್ನು ಕೊನೆಗೊಳ್ಳುತ್ತದೆ.

ಜಿಲ್ಲೆಯಲ್ಲಿ 58 ಕಿಮೀ ಮಾನವ ಸರಪಳಿ

ಜಿಲ್ಲೆಗೆ ಸಂಬಂಧಿಸಿದಂತೆ ಈ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಸುಮಾರು 55,000 ಜನರು ಒಳಗೊಂಡು 58ಕಿ.ಮೀ ಮಾನವ ಸರಪಳಿ ರಚನೆಯಲ್ಲಿ ಜಿಲ್ಲೆಯ ಎಲ್ಲಾ ಎಲ್ಲ ಸಂಘಟನೆ ಪದಾಧಿಕಾರಿಗಳು ಜನಪ್ರತಿನಿಧಿಗಳು ಸಮುದಾಯದ ಮುಖಂಡರುಗಳು ಶಾಲೆ- ಕಾಲೇಜು ವಿದ್ಯಾರ್ಥಿಗಳು ಮಾನವ ಸರಪಳಿಯಲ್ಲಿ ಭಾಗವಹಿಸಲಾಗುತ್ತಿದೆ.

ಕಾರ್ಯಕ್ರಮವ ಪಟ್ಟಿ ಹೀಗಿದೆ..

ವೇದಿಕೆ ಕಾರ್ಯಕ್ರಮ ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಆಯೋಜಿಸಲಾಗಿದೆ.

ಬೆಳಿಗ್ಗೆ 9,30 ರಿಂದ 9,37 ರವರಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲುವುದು.

9,37 ರಿಂದ 9,40 ರವರಗೆ ನಾಡಗೀತೆ

9,40 ರಿಂದ 9,55 ರವರಗೆ ಮುಖ್ಯ ಅತಿಥಿಗಳಿಂದ ಭಾಷಣ

9,55 ರಿಂದ 9,57 ರವರಗೆ ಸಂವಿಧಾನದ ಪ್ರಸ್ತಾವನೆ ಓದುವುದು

9,57 ರಿಂದ 9,59 ಮಾನವ ಸರಪಳಿಯಲ್ಲಿ ಕೈ, ಕೈ ಹಿಡಿದು ನಿಲ್ಲುವುದು

10 ಗಂಟೆಗೆ ಮಾನವ ಸರಪಳಿಯಲ್ಲಿಯೇ ತಮ್ಮ ಎರಡೂ ಕೈಗಳನ್ನು ಮೇಲೆತ್ತಿ ಜೈಹಿಂದ್, ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿಯನ್ನು ಕಳಚುವುದು.

ಮಾನವ ಸರಪಳಿ ಮಾರ್ಗ 

ಮೈಸೂರು ತಾಲೂಕಿನ ಕಳಸ್ತವಾಡಿ ಸಿದ್ದಲಿಂಗ ಪುರದಿಂದ ಪ್ರಾರಂಭವಾಗಿ ಮಣಿಪಾಲ್ ಆಸ್ಪತ್ರೆ, ಪೌಂಟನ್ ಸರ್ಕಲ್, ಗಾಂಧಿ ನಗರದ ಅಂಬೇಡ್ಕರ್ ವೃತ್ತ, ಟೌನ್ಹಾಲ್, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, ಹಾರ್ಡಿಂಜ್ ಸರ್ಕಲ್, ಮೃಗಾಲಯ, ರೇಸ್ ಕೋರ್ಸ್ ಸರ್ಕಲ್, ಪೊಲೀಸ್ ಭವನ, ಸಂಗೊಳ್ಳಿ ರಾಯಣ್ಣ ಸರ್ಕಲ್, ಕಮಾನ್ ಗೇಟ್, ರಿಂಗ್ ರಸ್ತೆ, ವರುಣ ಗ್ರಾಮ, ಕೀಳನ ಪುರ, ಕೆಂಪಯ್ಯನ ಹುಂಡಿ, ಇಂಡುವಾಳು, ಗರ್ಗೇಶ್ವರಿ, ತಿ.ನರಸೀಪುರ ಟೌನ್, ಗಂಜಾಂ ನರಸಿಂಹ ಸ್ವಾಮಿ ದೇವಸ್ಥಾನ, ಅಲಗೂಡು, ಕುರಬೂರು, ಮಾಡ್ರಳ್ಳಿ ಗೇಟ್, ಮೂಗೂರು ಗ್ರಾಮದ ಮೂಲಕ ಚಾಮರಾಜ ನಗರ ಜಿಲ್ಲೆಯ ಗಡಿ ಪ್ರವೇಶಿಸಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

8 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

10 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

12 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

13 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

16 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

16 hours ago