ಮೈಸೂರು: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಹಿನ್ನೆಲೆ ಕಲ್ಲಿದ್ದಲು ತುಂಬಿದ ಲಾರಿ ಹೊತ್ತಿ ಉರಿದಿದ್ದು, ಅಗ್ನಿಶಾಮಕ ದಳದವರು ಸಮಯಕ್ಕೆ ಬಂದು ಬೆಂಕಿ ನಂದಿಸಿದ ಘಟನೆ ಮೈಸೂರು ಹುಣಸೂರು ರಸ್ತೆಯ ಹೂಟಗಳ್ಳಿಯ ಬಡಾವಣೆಯಲ್ಲಿ ನಡೆದಿದೆ.
ಇಂದು ಮಧ್ಯಾಹ್ನ 1 ಗಂಟೆ ಸಮಯದಲ್ಲಿ 18 ಚಕ್ರದ ಬೃಹತ್ ಲಾರಿ ತಮಿಳುನಾಡಿನ ತೂತುಕುಡಿಯಿಂದ ಕುಶಾಲನಗರಕ್ಕೆ ಕಲ್ಲಿದ್ದಲು ತುಂಬಿಕೊಂಡು ಹೋಗುತ್ತಿತ್ತು. ಈ ವೇಳೆ ಲಾರಿಯಲ್ಲಿ ಏಕಾಏಕಿ ತಾಂತ್ರಿಕ ದೋಷದಿಂದ ದಿಢೀರನೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಅಂತೋಣಿ ಲಾರಿಯನ್ನು ನಡುರಸ್ತೆಯಲ್ಲೇ ನಿಲ್ಲಿಸಿ ಕೆಳಗೆ ಇಳಿದಿದ್ದಾರೆ.
ಅಷ್ಟೊತ್ತಿಗಾಗಲೇ ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರು. ತಕ್ಷಣ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಇದರಿಂದಾಗಿ ಲಾರಿ ಸಂಪೂರ್ಣ ಸುಟ್ಟು ನಾಶವಾಗುವುದು ತಪ್ಪಿದೆ. ವಿಜಯನಗರ ಪೊಲೀಸರು ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…