ಮೈಸೂರು ನಗರ

ಮೈಸೂರು | ಲಾಭದಾಸೆಗೆ ಬಿದ್ದ ಮಹಿಳೆಗೆ 1.58 ಕೋಟಿ ರೂ.ವಂಚನೆ! ಮೋಸ ಹೋಗಿದ್ದೇಗೆ?

ಮೈಸೂರು : ಹೆಚ್ಚಿನ ಲಾಭದಾಸೆಗೆ ಬಿದ್ದು ನಕಲಿ ಕಂಪನಿ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ ಮಹಿಳೆಯೊಬ್ಬರು ಬರೋಬ್ಬರಿ 1.58 ಕೋಟಿ ರೂ. ಹಣವನ್ನು ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಈ ಸಂಬಂಧ ಮೈಸೂರಿನ ಸೈಬರ್‌ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಗರದ ಜೆಪಿನಗರ ನಿವಾಸಿ ಮಹಿಳೆಗೆ ವಾಟ್ಸಾಪ್ ಗ್ರೂಪ್‌ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಮಾಹಿತಿ ದೊರಕಿದೆ. ನಂತರ ಅವರು ಸ್ಯಾಮ್ಕೋ ಹಾಗೂ ಟೆನ್‌ಕೋರ್ ಎಂಬ ಆಪ್ ಮೂಲಕ ಮೊದಲಿಗೆ 60 ಸಾವಿರ ರೂ. ಹಣ ಹೂಡಿಕೆ ಮಾಡಿದ್ದಾರೆ.

ಇದನ್ನೂ ಓದಿ :-12 ರಾಜ್ಯಗಳಲ್ಲಿ SIR ಜಾರಿ ; ಕರ್ನಾಟಕದಲ್ಲೂ ನಡೆಯುತ್ತಾ? ಏನಿದು SIR, ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್….

ಇದರಿಂದಾಗಿ ವಂಚಕರು ಅವರಿಗೆ ಲಾಭವನ್ನು ನೀಡಿ ಹಣದ ಆಸೆ ಹುಟ್ಟಿಸಿದ್ದಾರೆ. ನಂತರ ಆಕೆ ಹೆಚ್ಚಿನ ಹಣದಾಸೆಗೆ ಹಂತಹಂತವಾಗಿ ತನ್ನ ಬ್ಯಾಂಕ್ ಖಾತೆಯಿಂದ ವಂಚಕರ ಖಾತೆಗೆ 1,58,93000 ರೂ. ಹಣವನ್ನು ವರ್ಗಾಯಿಸಿದ್ದಾರೆ.

ನಂತರ ವಂಚಕರು ನಿಮಗೆ ಹೆಚ್ಚಿನ ಲಾಭ ಬಂದಿದೆ. ಹಣವನು ಪಡೆಯಲು 16 ಲಕ್ಷ ರೂ. ಹಣವನ್ನು ಖಾತೆಗೆ ಜಮೆ ಮಾಡುವಂತೆ ಹೇಳಿದ್ದಾರೆ. ಇದರಿಂದ ಅನುಮಾನಗೊಂಡ ಆಕೆ ವಿಚಾರಿಸಿದ ವೇಳೆ ತಾನು ಮೋಸ ಹೋಗಿರುವುದು ಗೊತ್ತಾಗಿದೆ. ಕೂಡಲೇ ಆಕೆ ಸೈಬರ್ ಅಪರಾಧ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

8 mins ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

28 mins ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

45 mins ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

2 hours ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

2 hours ago

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

5 hours ago