ಮೈಸೂರು : ಹೆಚ್ಚಿನ ಲಾಭದಾಸೆಗೆ ಬಿದ್ದು ನಕಲಿ ಕಂಪನಿ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ ಮಹಿಳೆಯೊಬ್ಬರು ಬರೋಬ್ಬರಿ 1.58 ಕೋಟಿ ರೂ. ಹಣವನ್ನು ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಈ ಸಂಬಂಧ ಮೈಸೂರಿನ ಸೈಬರ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಗರದ ಜೆಪಿನಗರ ನಿವಾಸಿ ಮಹಿಳೆಗೆ ವಾಟ್ಸಾಪ್ ಗ್ರೂಪ್ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಮಾಹಿತಿ ದೊರಕಿದೆ. ನಂತರ ಅವರು ಸ್ಯಾಮ್ಕೋ ಹಾಗೂ ಟೆನ್ಕೋರ್ ಎಂಬ ಆಪ್ ಮೂಲಕ ಮೊದಲಿಗೆ 60 ಸಾವಿರ ರೂ. ಹಣ ಹೂಡಿಕೆ ಮಾಡಿದ್ದಾರೆ.
ಇದನ್ನೂ ಓದಿ :-12 ರಾಜ್ಯಗಳಲ್ಲಿ SIR ಜಾರಿ ; ಕರ್ನಾಟಕದಲ್ಲೂ ನಡೆಯುತ್ತಾ? ಏನಿದು SIR, ಇಲ್ಲಿದೆ ಕಂಪ್ಲಿಟ್ ಡೀಟೆಲ್ಸ್….
ಇದರಿಂದಾಗಿ ವಂಚಕರು ಅವರಿಗೆ ಲಾಭವನ್ನು ನೀಡಿ ಹಣದ ಆಸೆ ಹುಟ್ಟಿಸಿದ್ದಾರೆ. ನಂತರ ಆಕೆ ಹೆಚ್ಚಿನ ಹಣದಾಸೆಗೆ ಹಂತಹಂತವಾಗಿ ತನ್ನ ಬ್ಯಾಂಕ್ ಖಾತೆಯಿಂದ ವಂಚಕರ ಖಾತೆಗೆ 1,58,93000 ರೂ. ಹಣವನ್ನು ವರ್ಗಾಯಿಸಿದ್ದಾರೆ.
ನಂತರ ವಂಚಕರು ನಿಮಗೆ ಹೆಚ್ಚಿನ ಲಾಭ ಬಂದಿದೆ. ಹಣವನು ಪಡೆಯಲು 16 ಲಕ್ಷ ರೂ. ಹಣವನ್ನು ಖಾತೆಗೆ ಜಮೆ ಮಾಡುವಂತೆ ಹೇಳಿದ್ದಾರೆ. ಇದರಿಂದ ಅನುಮಾನಗೊಂಡ ಆಕೆ ವಿಚಾರಿಸಿದ ವೇಳೆ ತಾನು ಮೋಸ ಹೋಗಿರುವುದು ಗೊತ್ತಾಗಿದೆ. ಕೂಡಲೇ ಆಕೆ ಸೈಬರ್ ಅಪರಾಧ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಟೆಹ್ರಾನ್ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…
ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…
ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್ವೆಲ್ಗಳನ್ನು…
ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…
ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…