ಮೈಸೂರು : ಹೆಚ್ಚಿನ ಲಾಭದಾಸೆಗೆ ಬಿದ್ದು ನಕಲಿ ಕಂಪನಿ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ ಮಹಿಳೆಯೊಬ್ಬರು ಬರೋಬ್ಬರಿ 1.58 ಕೋಟಿ ರೂ. ಹಣವನ್ನು ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಈ ಸಂಬಂಧ ಮೈಸೂರಿನ ಸೈಬರ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಗರದ ಜೆಪಿನಗರ ನಿವಾಸಿ ಮಹಿಳೆಗೆ ವಾಟ್ಸಾಪ್ ಗ್ರೂಪ್ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಮಾಹಿತಿ ದೊರಕಿದೆ. ನಂತರ ಅವರು ಸ್ಯಾಮ್ಕೋ ಹಾಗೂ ಟೆನ್ಕೋರ್ ಎಂಬ ಆಪ್ ಮೂಲಕ ಮೊದಲಿಗೆ 60 ಸಾವಿರ ರೂ. ಹಣ ಹೂಡಿಕೆ ಮಾಡಿದ್ದಾರೆ.
ಇದನ್ನೂ ಓದಿ :-12 ರಾಜ್ಯಗಳಲ್ಲಿ SIR ಜಾರಿ ; ಕರ್ನಾಟಕದಲ್ಲೂ ನಡೆಯುತ್ತಾ? ಏನಿದು SIR, ಇಲ್ಲಿದೆ ಕಂಪ್ಲಿಟ್ ಡೀಟೆಲ್ಸ್….
ಇದರಿಂದಾಗಿ ವಂಚಕರು ಅವರಿಗೆ ಲಾಭವನ್ನು ನೀಡಿ ಹಣದ ಆಸೆ ಹುಟ್ಟಿಸಿದ್ದಾರೆ. ನಂತರ ಆಕೆ ಹೆಚ್ಚಿನ ಹಣದಾಸೆಗೆ ಹಂತಹಂತವಾಗಿ ತನ್ನ ಬ್ಯಾಂಕ್ ಖಾತೆಯಿಂದ ವಂಚಕರ ಖಾತೆಗೆ 1,58,93000 ರೂ. ಹಣವನ್ನು ವರ್ಗಾಯಿಸಿದ್ದಾರೆ.
ನಂತರ ವಂಚಕರು ನಿಮಗೆ ಹೆಚ್ಚಿನ ಲಾಭ ಬಂದಿದೆ. ಹಣವನು ಪಡೆಯಲು 16 ಲಕ್ಷ ರೂ. ಹಣವನ್ನು ಖಾತೆಗೆ ಜಮೆ ಮಾಡುವಂತೆ ಹೇಳಿದ್ದಾರೆ. ಇದರಿಂದ ಅನುಮಾನಗೊಂಡ ಆಕೆ ವಿಚಾರಿಸಿದ ವೇಳೆ ತಾನು ಮೋಸ ಹೋಗಿರುವುದು ಗೊತ್ತಾಗಿದೆ. ಕೂಡಲೇ ಆಕೆ ಸೈಬರ್ ಅಪರಾಧ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…