ಮೈಸೂರು: ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರು ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, ರಾಜ್ಯದೆಲ್ಲೆಡೆ ಡ್ರಗ್ಸ್ ಮಾಫಿಯಾ ತೊಲಗಬೇಕು. NDPS ಕಾಯ್ದೆಗೆ ಮತ್ತಷ್ಟು ಬಲ ಬೇಕು. ಡ್ರಗ್ಸ್ ಮಾಫಿಯಾ ಮಾಡುವವರನ್ನು ಎಡೆಮುರಿ ಕಟ್ಟಬೇಕು. ಇದಕ್ಕಾಗಿ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ಮೂಲಕ ರಾಜ್ಯದಲ್ಲಿ ಡ್ರಗ್ಸ್ ದಂಧೆಗೆ ಸಂಪೂರ್ಣ ಬ್ರೇಕ್ ಬೀಳಬೇಕು ಎಂದು ಆಗ್ರಹಿಸಿದರು.





