ಮೈಸೂರು ನಗರ

ಮೈಸೂರು | ಎಐನಲ್ಲಿ ಕ್ರಿಯೇಟ್‌ ಮಾಡಿರುವ ಚಿರತೆ ಫೋಟೋ ವೈರಲ್‌

ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು ಚಿರತೆ ಕುಳಿತಿದೆ ಎಂಬ ಫೋಟೋವೊಂದು ಹರಿದಾಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ ಇದೊಂದು AIನಲ್ಲಿ ಕ್ರಿಯೇಟ್ ಮಾಡಿರುವ ಫೋಟೋ ಆಗಿದ್ದು ಎರಡು ಮೂರು ಫೇಕ್ ಫೋಟೋಗಳು ಹರಿದಾಡುತ್ತಿದೆ.

ಇದನ್ನು ಓದಿ: ಹುಲಿ ಓಡಾಡುವ ನಕಲಿ(AI) ವಿಡಿಯೋ : ಹರಿಬಿಟ್ಟವರ ಕ್ರಮಕ್ಕೆ ಶಾಸಕ ದರ್ಶನ್‌ ಸೂಚನೆ

ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರಿನ ಜಯನಗರ, ಚಿಕ್ಕಹರದನಹಳ್ಳಿ ಪಂಪಾಪತಿ ರಸ್ತೆಯ ಅಂಗಡಿ ಬದಿ ವ್ಯಾಪಾರಸ್ಥರು ಹಾಗೂ ಸ್ಥಳೀಯರಿಗೆ ಸಂಜೆ 6 ಗಂಟೆ ನಂತರ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅದರಂತೆ ಪ್ರತಿದಿನ ವ್ಯಾಪಾರಸ್ಥರು ಬೇಗ ಅಂಗಡಿಗಳನ್ನು ಮುಚ್ಚಿ ವ್ಯಾಪಾರ ಸ್ಥಗಿತಗೊಳಿಸಿ ಮನೆಗಳಿಗೆ ತೆರಳುತ್ತಿದ್ದಾರೆ.
ಜೊತೆಗೆ ಸಂಜೆಯಾಗುತ್ತಿದ್ದಂತೆ ರಸ್ತೆಯಲ್ಲಿ ಕಡಿಮೆ ಪ್ರಮಾಣದಲ್ಲಿ ಜನರು ಓಡಾಡುತ್ತಿದ್ದಾರೆ ಎಂದು ಅಲ್ಲಿನ ಸ್ಥಳೀಯರು ತಿಳಿಸುತ್ತಿದ್ದಾರೆ.

ಒಟ್ಟಾರೆ ಕಿಡಿಗೇಡಿಗಳು AIನಲ್ಲಿ ಫೇಕ್ ಫೋಟೋವೊಂದನ್ನು ರಚಿಸಿ ಸ್ಥಳೀಯರಿಗೆ ಭಯವನ್ನುಂಟು ಮಾಡುವುದರ ಜೊತೆಗೆ ವ್ಯಾಪಾರಸ್ಥರ ವ್ಯಾಪಾರಕ್ಕೆ ಸಂಚಕಾರ ತಂದಿಟ್ಟಿದ್ದಾರೆ.

ಈ ಸಂಬಂಧ ಅರಣ್ಯ ಇಲಾಖೆಯ ಅಧಿಕಾರಿಗಳು ಸಭೆ ನಡೆಸುತ್ತಿದ್ದು ಈ ರೀತಿ ಫೇಕ್ ಫೋಟೋಗಳನ್ನು ಹರಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

4 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

7 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

7 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

7 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

8 hours ago