ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು ಚಿರತೆ ಕುಳಿತಿದೆ ಎಂಬ ಫೋಟೋವೊಂದು ಹರಿದಾಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ ಇದೊಂದು AIನಲ್ಲಿ ಕ್ರಿಯೇಟ್ ಮಾಡಿರುವ ಫೋಟೋ ಆಗಿದ್ದು ಎರಡು ಮೂರು ಫೇಕ್ ಫೋಟೋಗಳು ಹರಿದಾಡುತ್ತಿದೆ.
ಇದನ್ನು ಓದಿ: ಹುಲಿ ಓಡಾಡುವ ನಕಲಿ(AI) ವಿಡಿಯೋ : ಹರಿಬಿಟ್ಟವರ ಕ್ರಮಕ್ಕೆ ಶಾಸಕ ದರ್ಶನ್ ಸೂಚನೆ
ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರಿನ ಜಯನಗರ, ಚಿಕ್ಕಹರದನಹಳ್ಳಿ ಪಂಪಾಪತಿ ರಸ್ತೆಯ ಅಂಗಡಿ ಬದಿ ವ್ಯಾಪಾರಸ್ಥರು ಹಾಗೂ ಸ್ಥಳೀಯರಿಗೆ ಸಂಜೆ 6 ಗಂಟೆ ನಂತರ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅದರಂತೆ ಪ್ರತಿದಿನ ವ್ಯಾಪಾರಸ್ಥರು ಬೇಗ ಅಂಗಡಿಗಳನ್ನು ಮುಚ್ಚಿ ವ್ಯಾಪಾರ ಸ್ಥಗಿತಗೊಳಿಸಿ ಮನೆಗಳಿಗೆ ತೆರಳುತ್ತಿದ್ದಾರೆ.
ಜೊತೆಗೆ ಸಂಜೆಯಾಗುತ್ತಿದ್ದಂತೆ ರಸ್ತೆಯಲ್ಲಿ ಕಡಿಮೆ ಪ್ರಮಾಣದಲ್ಲಿ ಜನರು ಓಡಾಡುತ್ತಿದ್ದಾರೆ ಎಂದು ಅಲ್ಲಿನ ಸ್ಥಳೀಯರು ತಿಳಿಸುತ್ತಿದ್ದಾರೆ.
ಒಟ್ಟಾರೆ ಕಿಡಿಗೇಡಿಗಳು AIನಲ್ಲಿ ಫೇಕ್ ಫೋಟೋವೊಂದನ್ನು ರಚಿಸಿ ಸ್ಥಳೀಯರಿಗೆ ಭಯವನ್ನುಂಟು ಮಾಡುವುದರ ಜೊತೆಗೆ ವ್ಯಾಪಾರಸ್ಥರ ವ್ಯಾಪಾರಕ್ಕೆ ಸಂಚಕಾರ ತಂದಿಟ್ಟಿದ್ದಾರೆ.
ಈ ಸಂಬಂಧ ಅರಣ್ಯ ಇಲಾಖೆಯ ಅಧಿಕಾರಿಗಳು ಸಭೆ ನಡೆಸುತ್ತಿದ್ದು ಈ ರೀತಿ ಫೇಕ್ ಫೋಟೋಗಳನ್ನು ಹರಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…