ಮೈಸೂರು ನಗರ

ಮೈಸೂರು | ಉಯಯಗಿರಿ, ಕುವೆಂಪುನಗರಕ್ಕೆ ಮತ್ತೊಂದು ಠಾಣೆ, ಅಗತ್ಯ ಸೌಲಭ್ಯಕ್ಕೆ ಬದ್ಧ ; ಹೋಂ ಮಿನಿಸ್ಟರ್‌

ಮೈಸೂರು : ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಯ ಪ್ರಕರಣಗಳಲ್ಲಿ ವಸೂಲಾಗುವ ಶುಲ್ಕದ ಮೊತ್ತದಲ್ಲಿ ಶೇ.50ರಷ್ಟು ಸರ್ಕಾರಕ್ಕೆ ಮತ್ತು ಇಲಾಖೆಯಲ್ಲಿ ಬಳಸಲಾಗುತ್ತಿದ್ದು, ಅದೇ ರೀತಿ ಮೈಸೂರಿನಲ್ಲಿ ನೀಡುವ ಬಗ್ಗೆ ಪರಿಶೀಲಿಸುತ್ತೇನೆ. ಒಂದು ವೇಳೆ ಅವಕಾಶ ಇದ್ದರೆ ಅನುಮೋದನೆ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಮೈಸೂರು ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಯ ಪ್ರಕರಣಗಳಲ್ಲಿ ಸಂಗ್ರಹವಾಗುವ ಶುಲ್ಕದಲ್ಲಿ ಸರ್ಕಾರಕ್ಕೆ ಶೇ.50ರಷ್ಟು ಕೊಟ್ಟು,ಉಳಿದ ಶೇ.50ನ್ನು ಇಲಾಖೆಗೆ ಬಳಸಲಾಗುತ್ತಿದೆ. ಅದೇ ರೀತಿ ಮೈಸೂರಿನಲ್ಲೂ ಅವಕಾಶ ಮಾಡಿಕೊಡುವಂತೆ ಶಾಸಕ ತನ್ವೀರ್ ಸೇಠ್ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಪರಿಶೀಲಿಸಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಒಂದು ವೇಳೆ ಅವಕಾಶ ಇದ್ದರೆ ಅನುಮೋದನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಕುವೆಂಪುನಗರದಲ್ಲಿ ಮತ್ತೊಂದು ಸಂಚಾರ ಪೊಲೀಸ್ ಠಾಣೆ ತೆರೆಯಲು ಮನವಿ ಬಂದಿದ್ದು, ಪರಿಶೀಲನೆ ನಡೆಸಿ ವರದಿ ಕೊಡುವಂತೆ ಆಯುಕ್ತರಿಗೆ ಹೇಳಿದ್ದೇನೆ. ಸಕರಾತ್ಮಕವಾಗಿ ವರದಿ ಬಂದರೆ ಖಂಡಿತ ಅನುಮತಿ ಕೊಡಲಾಗುವುದು. ಅದೇ ರೀತಿ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾರ್ಯ ದೊಡ್ಡದಾಗಿದ್ದರಿಂದ ಮತ್ತೊಂದು ಠಾಣೆಯನ್ನು ಕೊಡದೆ ವಿಭಜಿಸಲಾಗಿದೆ. ಈಗ ವಿಭಜನೆಗೊಂಡಿರುವ ಠಾಣೆಗೆ ಶೀಘ್ರದಲ್ಲೇ ಬೇಕಾದ ಸಿಬ್ಬಂದಿ, ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ನುಡಿದರು.

ಮೈಸೂರು ಬಹಳ ವೇಗವಾಗಿ ಬೆಳೆಯುತ್ತಿದೆ. ಗ್ರೇಟರ್ ಮೈಸೂರು ಮಾಡುತ್ತಿದ್ದಾರೆ. ಬೆಂಗಳೂರನ್ನು ಡಿ.ಕೆ.ಶಿವಕುಮಾರ್ ಅವರು ಗ್ರೇಟರ್ ಬೆಂಗಳೂರು ಮಾಡಿದರು. ಈಗ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಮಾಡಲು ತೀರ್ಮಾನಿಸಿದ್ದಾರೆ. ಮೈಸೂರಿನ ಜನಸಂಖ್ಯೆ 15ಲಕ್ಷ ಇದ್ದರೆ, ಹದಿನೆಂಟು ಲಕ್ಷ ವಾಹನಗಳು ಇವೆ. ಒಬ್ಬೊಬ್ಬ ಒಂದರಿಂದ ಎರಡು ವಾಹನಗಳನ್ನು ಹೊಂದಿದ್ದಾರೆ. ಪ್ರತಿನಿತ್ಯ ಅಪರಾಧ ಚಟುವಟಿಕೆ ನಡೆಯುತ್ತದೆ. ಸಂಚಾರ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗುತ್ತದೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

5 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

6 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

8 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

8 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

12 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

13 hours ago