ಮೈಸೂರು ನಗರ

ಮೈಸೂರು | ಸ್ವಚ್ಛತಾ ರಾಯಾಭಾರಿಗಳಾಗಿ ಆರು ಗಣ್ಯರ ನೇಮಕ

ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆಯು ಆರು ಮಂದಿ ಸಾಧಕರನ್ನು `ಸ್ವಚ್ಛತಾ ಬ್ರಾಂಡ್ ಅಂಬಾಸಿಡರ್’ಗಳನ್ನಾಗಿ ನೇಮಕ ಮಾಡಿದೆ.

ಸ್ವಚ್ಛ ಭಾರತ ಅಭಿಯಾನದಡಿ ಮೈಸೂರು ನಗರವನ್ನು ಕೇವಲ ಬಾಹ್ಯವಾಗಿ ಅಷ್ಟೇ ಅಲ್ಲದೆ, ನಾಗರಿಕರ ಮನೋಭಾವದಲ್ಲಿಯೂ ಸ್ವಚ್ಛತೆಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಪಾಲಿಕೆ ಈ ಕ್ರಮ ಕೈಗೊಂಡಿದೆ. ಚಲನಚಿತ್ರ, ಸಂಗೀತ ಹಾಗೂ ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆ ಸಲ್ಲಿಸಿರುವ ಗಣ್ಯರ ಜನಪ್ರಿಯತೆ ಮತ್ತು ಬದ್ಧತೆಯನ್ನು ಗಮನಿಸಿ ಈ ಜವಾಬ್ದಾರಿ ನೀಡಲಾಗಿದೆ.

ಶಿಲ್ಪಿ ಅರುಣ್ ಯೋಗಿರಾಜ್, ಚಲನಚಿತ್ರ ಕಲಾವಿದ ವಸಿಷ್ಠ ಸಿಂಹ, ನಟಿ ಹರಿಪ್ರಿಯಾ, ಬಿಗ್‌ಬಾಸ್ ಖ್ಯಾತಿಯ ಸೂರಜ್ ಸಿಂಗ್, ಗಾಯಕರಾದ ಅನನ್ಯ ಭಟ್ ಹಾಗೂ ಆಲೋಕ್ ಅವರುಗಳನ್ನು ಮೈಸೂರು ಮಹಾನಗರ ಪಾಲಿಕೆಯ ನೂತನ ಸ್ವಚ್ಛತಾ ರಾಯಭಾರಿಗಳಾಗಿ ನೇಮಿಸಲಾಗಿದೆ.

ನೇಮಕಗೊಂಡಿರುವ ಈ ಗಣ್ಯರು ನಗರದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಲಿದ್ದಾರೆ. ಪಾಲಿಕೆಯು ಹಮ್ಮಿಕೊಳ್ಳುವ ಸ್ವಚ್ಛ ಭಾರತ ಅಭಿಯಾನದ ವಿವಿಧ ಕಾರ್ಯಕ್ರಮಗಳು ಹಾಗೂ ಜಾಗೃತಿ ಜಾಥಾಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಸ್ವಚ್ಛತೆಯ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸುವ ಕೆಲಸವನ್ನು ಇವರು ಮಾಡಲಿದ್ದಾರೆ.

ಸಂಪೂರ್ಣವಾಗಿ ಸೇವಾ ಮನೋಭಾವದಿಂದ, ಯಾವುದೇ ಗೌರವಧನ ಅಥವಾ ಆರ್ಥಿಕ ಲಾಭದ ಅಪೇಕ್ಷೆಯಿಲ್ಲದೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ಸಾಧಕರು ರಾಯಭಾರಿಗಳಾಗಿ ನೇಮಕಗೊಂಡಿದ್ದಾರೆ. ಮೈಸೂರನ್ನು ಶಿಸ್ತುಬದ್ಧ ಹಾಗೂ ಮಾದರಿ ನಗರವಾಗಿ ರೂಪಿಸುವ ಪಾಲಿಕೆಯ ಆಶಯಕ್ಕೆ ಇವರ ಸಹಕಾರ ಜೊತೆಯಾಗಲಿದೆ ಎಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್ ಆಸಿಫ್ ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago