ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆಯು ಆರು ಮಂದಿ ಸಾಧಕರನ್ನು `ಸ್ವಚ್ಛತಾ ಬ್ರಾಂಡ್ ಅಂಬಾಸಿಡರ್’ಗಳನ್ನಾಗಿ ನೇಮಕ ಮಾಡಿದೆ.
ಸ್ವಚ್ಛ ಭಾರತ ಅಭಿಯಾನದಡಿ ಮೈಸೂರು ನಗರವನ್ನು ಕೇವಲ ಬಾಹ್ಯವಾಗಿ ಅಷ್ಟೇ ಅಲ್ಲದೆ, ನಾಗರಿಕರ ಮನೋಭಾವದಲ್ಲಿಯೂ ಸ್ವಚ್ಛತೆಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಪಾಲಿಕೆ ಈ ಕ್ರಮ ಕೈಗೊಂಡಿದೆ. ಚಲನಚಿತ್ರ, ಸಂಗೀತ ಹಾಗೂ ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆ ಸಲ್ಲಿಸಿರುವ ಗಣ್ಯರ ಜನಪ್ರಿಯತೆ ಮತ್ತು ಬದ್ಧತೆಯನ್ನು ಗಮನಿಸಿ ಈ ಜವಾಬ್ದಾರಿ ನೀಡಲಾಗಿದೆ.
ಶಿಲ್ಪಿ ಅರುಣ್ ಯೋಗಿರಾಜ್, ಚಲನಚಿತ್ರ ಕಲಾವಿದ ವಸಿಷ್ಠ ಸಿಂಹ, ನಟಿ ಹರಿಪ್ರಿಯಾ, ಬಿಗ್ಬಾಸ್ ಖ್ಯಾತಿಯ ಸೂರಜ್ ಸಿಂಗ್, ಗಾಯಕರಾದ ಅನನ್ಯ ಭಟ್ ಹಾಗೂ ಆಲೋಕ್ ಅವರುಗಳನ್ನು ಮೈಸೂರು ಮಹಾನಗರ ಪಾಲಿಕೆಯ ನೂತನ ಸ್ವಚ್ಛತಾ ರಾಯಭಾರಿಗಳಾಗಿ ನೇಮಿಸಲಾಗಿದೆ.
ನೇಮಕಗೊಂಡಿರುವ ಈ ಗಣ್ಯರು ನಗರದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಲಿದ್ದಾರೆ. ಪಾಲಿಕೆಯು ಹಮ್ಮಿಕೊಳ್ಳುವ ಸ್ವಚ್ಛ ಭಾರತ ಅಭಿಯಾನದ ವಿವಿಧ ಕಾರ್ಯಕ್ರಮಗಳು ಹಾಗೂ ಜಾಗೃತಿ ಜಾಥಾಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಸ್ವಚ್ಛತೆಯ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸುವ ಕೆಲಸವನ್ನು ಇವರು ಮಾಡಲಿದ್ದಾರೆ.
ಸಂಪೂರ್ಣವಾಗಿ ಸೇವಾ ಮನೋಭಾವದಿಂದ, ಯಾವುದೇ ಗೌರವಧನ ಅಥವಾ ಆರ್ಥಿಕ ಲಾಭದ ಅಪೇಕ್ಷೆಯಿಲ್ಲದೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ಸಾಧಕರು ರಾಯಭಾರಿಗಳಾಗಿ ನೇಮಕಗೊಂಡಿದ್ದಾರೆ. ಮೈಸೂರನ್ನು ಶಿಸ್ತುಬದ್ಧ ಹಾಗೂ ಮಾದರಿ ನಗರವಾಗಿ ರೂಪಿಸುವ ಪಾಲಿಕೆಯ ಆಶಯಕ್ಕೆ ಇವರ ಸಹಕಾರ ಜೊತೆಯಾಗಲಿದೆ ಎಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್ ಆಸಿಫ್ ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…