ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆಯು ಆರು ಮಂದಿ ಸಾಧಕರನ್ನು `ಸ್ವಚ್ಛತಾ ಬ್ರಾಂಡ್ ಅಂಬಾಸಿಡರ್’ಗಳನ್ನಾಗಿ ನೇಮಕ ಮಾಡಿದೆ.
ಸ್ವಚ್ಛ ಭಾರತ ಅಭಿಯಾನದಡಿ ಮೈಸೂರು ನಗರವನ್ನು ಕೇವಲ ಬಾಹ್ಯವಾಗಿ ಅಷ್ಟೇ ಅಲ್ಲದೆ, ನಾಗರಿಕರ ಮನೋಭಾವದಲ್ಲಿಯೂ ಸ್ವಚ್ಛತೆಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಪಾಲಿಕೆ ಈ ಕ್ರಮ ಕೈಗೊಂಡಿದೆ. ಚಲನಚಿತ್ರ, ಸಂಗೀತ ಹಾಗೂ ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆ ಸಲ್ಲಿಸಿರುವ ಗಣ್ಯರ ಜನಪ್ರಿಯತೆ ಮತ್ತು ಬದ್ಧತೆಯನ್ನು ಗಮನಿಸಿ ಈ ಜವಾಬ್ದಾರಿ ನೀಡಲಾಗಿದೆ.
ಶಿಲ್ಪಿ ಅರುಣ್ ಯೋಗಿರಾಜ್, ಚಲನಚಿತ್ರ ಕಲಾವಿದ ವಸಿಷ್ಠ ಸಿಂಹ, ನಟಿ ಹರಿಪ್ರಿಯಾ, ಬಿಗ್ಬಾಸ್ ಖ್ಯಾತಿಯ ಸೂರಜ್ ಸಿಂಗ್, ಗಾಯಕರಾದ ಅನನ್ಯ ಭಟ್ ಹಾಗೂ ಆಲೋಕ್ ಅವರುಗಳನ್ನು ಮೈಸೂರು ಮಹಾನಗರ ಪಾಲಿಕೆಯ ನೂತನ ಸ್ವಚ್ಛತಾ ರಾಯಭಾರಿಗಳಾಗಿ ನೇಮಿಸಲಾಗಿದೆ.
ನೇಮಕಗೊಂಡಿರುವ ಈ ಗಣ್ಯರು ನಗರದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಲಿದ್ದಾರೆ. ಪಾಲಿಕೆಯು ಹಮ್ಮಿಕೊಳ್ಳುವ ಸ್ವಚ್ಛ ಭಾರತ ಅಭಿಯಾನದ ವಿವಿಧ ಕಾರ್ಯಕ್ರಮಗಳು ಹಾಗೂ ಜಾಗೃತಿ ಜಾಥಾಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಸ್ವಚ್ಛತೆಯ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸುವ ಕೆಲಸವನ್ನು ಇವರು ಮಾಡಲಿದ್ದಾರೆ.
ಸಂಪೂರ್ಣವಾಗಿ ಸೇವಾ ಮನೋಭಾವದಿಂದ, ಯಾವುದೇ ಗೌರವಧನ ಅಥವಾ ಆರ್ಥಿಕ ಲಾಭದ ಅಪೇಕ್ಷೆಯಿಲ್ಲದೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ಸಾಧಕರು ರಾಯಭಾರಿಗಳಾಗಿ ನೇಮಕಗೊಂಡಿದ್ದಾರೆ. ಮೈಸೂರನ್ನು ಶಿಸ್ತುಬದ್ಧ ಹಾಗೂ ಮಾದರಿ ನಗರವಾಗಿ ರೂಪಿಸುವ ಪಾಲಿಕೆಯ ಆಶಯಕ್ಕೆ ಇವರ ಸಹಕಾರ ಜೊತೆಯಾಗಲಿದೆ ಎಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್ ಆಸಿಫ್ ತಿಳಿಸಿದ್ದಾರೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…