ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆಯು ಆರು ಮಂದಿ ಸಾಧಕರನ್ನು `ಸ್ವಚ್ಛತಾ ಬ್ರಾಂಡ್ ಅಂಬಾಸಿಡರ್’ಗಳನ್ನಾಗಿ ನೇಮಕ ಮಾಡಿದೆ.
ಸ್ವಚ್ಛ ಭಾರತ ಅಭಿಯಾನದಡಿ ಮೈಸೂರು ನಗರವನ್ನು ಕೇವಲ ಬಾಹ್ಯವಾಗಿ ಅಷ್ಟೇ ಅಲ್ಲದೆ, ನಾಗರಿಕರ ಮನೋಭಾವದಲ್ಲಿಯೂ ಸ್ವಚ್ಛತೆಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಪಾಲಿಕೆ ಈ ಕ್ರಮ ಕೈಗೊಂಡಿದೆ. ಚಲನಚಿತ್ರ, ಸಂಗೀತ ಹಾಗೂ ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆ ಸಲ್ಲಿಸಿರುವ ಗಣ್ಯರ ಜನಪ್ರಿಯತೆ ಮತ್ತು ಬದ್ಧತೆಯನ್ನು ಗಮನಿಸಿ ಈ ಜವಾಬ್ದಾರಿ ನೀಡಲಾಗಿದೆ.
ಶಿಲ್ಪಿ ಅರುಣ್ ಯೋಗಿರಾಜ್, ಚಲನಚಿತ್ರ ಕಲಾವಿದ ವಸಿಷ್ಠ ಸಿಂಹ, ನಟಿ ಹರಿಪ್ರಿಯಾ, ಬಿಗ್ಬಾಸ್ ಖ್ಯಾತಿಯ ಸೂರಜ್ ಸಿಂಗ್, ಗಾಯಕರಾದ ಅನನ್ಯ ಭಟ್ ಹಾಗೂ ಆಲೋಕ್ ಅವರುಗಳನ್ನು ಮೈಸೂರು ಮಹಾನಗರ ಪಾಲಿಕೆಯ ನೂತನ ಸ್ವಚ್ಛತಾ ರಾಯಭಾರಿಗಳಾಗಿ ನೇಮಿಸಲಾಗಿದೆ.
ನೇಮಕಗೊಂಡಿರುವ ಈ ಗಣ್ಯರು ನಗರದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಲಿದ್ದಾರೆ. ಪಾಲಿಕೆಯು ಹಮ್ಮಿಕೊಳ್ಳುವ ಸ್ವಚ್ಛ ಭಾರತ ಅಭಿಯಾನದ ವಿವಿಧ ಕಾರ್ಯಕ್ರಮಗಳು ಹಾಗೂ ಜಾಗೃತಿ ಜಾಥಾಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಸ್ವಚ್ಛತೆಯ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸುವ ಕೆಲಸವನ್ನು ಇವರು ಮಾಡಲಿದ್ದಾರೆ.
ಸಂಪೂರ್ಣವಾಗಿ ಸೇವಾ ಮನೋಭಾವದಿಂದ, ಯಾವುದೇ ಗೌರವಧನ ಅಥವಾ ಆರ್ಥಿಕ ಲಾಭದ ಅಪೇಕ್ಷೆಯಿಲ್ಲದೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ಸಾಧಕರು ರಾಯಭಾರಿಗಳಾಗಿ ನೇಮಕಗೊಂಡಿದ್ದಾರೆ. ಮೈಸೂರನ್ನು ಶಿಸ್ತುಬದ್ಧ ಹಾಗೂ ಮಾದರಿ ನಗರವಾಗಿ ರೂಪಿಸುವ ಪಾಲಿಕೆಯ ಆಶಯಕ್ಕೆ ಇವರ ಸಹಕಾರ ಜೊತೆಯಾಗಲಿದೆ ಎಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್ ಆಸಿಫ್ ತಿಳಿಸಿದ್ದಾರೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…