ಮೈಸೂರು ನಗರ

ಮೈಸೂರು | ಗಾಂಜ ಮಾರಾಟಕ್ಕೆ ಯತ್ನ ; ಇಬ್ಬರ ಬಂಧನ

ಮೈಸೂರು : ಗಾಂಜ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿರುವ ಕೆ.ಆರ್ ಠಾಣಾ ಪೊಲೀಸರು, ಆವರಿಂದ 3.44 ಕೆಜಿ ಗಾಂಜವನ್ನು ವಶಕ್ಕೆ ಪಡೆದಿದ್ದಾರೆ.

ನಗರದ ಕಾಕರವಾಡಿ ನಿವಾಸಿ ಇರ್ಫಾನ್ ಹಾಗೂ ಮದ್ದೂರಿನ ಸುಹೇಲ್ ಪಾಷಾ ಬಂಧಿತ ಆರೋಪಿಗಳು.

ನಗರದ ಜೆಎಸ್‌ಎಸ್ ಆಸ್ಪತ್ರೆಯ ಮುಂಬಾಗದ ರಸ್ತೆಯಲ್ಲಿ ಆರೋಪಿಗಳು ಗಾಂಜ ಮಾರಾಟ ಮಾಡಲು ಯತ್ನಿಸುತ್ತಿರುವ ವಿಚಾರ ಪೊಲೀಸರಿಗೆ ತಿಳಿದುಬಂದಿತ್ತು. ಕೂಡಲೇ ಪೊಲೀಸರ ತಂಡ ಸ್ಥಳಕ್ಕೆ ತೆರಳಿದ್ದಾರೆ.

ಇದನ್ನೂ ಓದಿ:-IPL ಚಾಂಪಿಯನ್‌ RCB ಮಾರಾಟಕ್ಕಿದೆ.. ! ಯಾರ ಪಾಲು..? ಎಷ್ಟು ಮೊತ್ತಾ ಗೊತ್ತಾ?

ಪೊಲೀಸರನ್ನು ಕಂಡೊಡನೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅವರನ್ನು ಸುತ್ತುವರೆದ ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಆರೋಪಿಗಳ ಬಳಿ ಇದ್ದ ಗಾಂಜವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಎಂಡಿಎಂಎ ವಶ
ಇದೇ ವೇಳೆ ನಗರದ ರಾಜೀವ್‌ನಗರ 2ನೇ ಹಂತದ ಬಳಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕಲ್ಯಾಣಗಿರಿ ನಿವಾಸಿ ಮಹಮದ್ ಉಬೇದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನಿಂದ ಸಾವಿರಾರು ರೂ. ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದಿರುವ ಉದಯಗಿರಿ ಠಾಣಾ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

32 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

33 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

35 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

37 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

45 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

52 mins ago