ಮೈಸೂರು ನಗರ

ಮೈಸೂರು | ರೈಲ್ವೆ ನಿಲ್ದಾಣದಲ್ಲಿ ಮಗು ಅಪಹರಣಕ್ಕೆ ಯತ್ನ.! ಕೆಲವೇ ಗಂಟೆಯಲ್ಲಿ ಆರೋಪಿ ಪತ್ತೆ ಹಚ್ಚಿದ ಪೊಲೀಸ್ರು

ಮೈಸೂರು : ನಗರದ ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ ಮಲಗಿದ್ದ ಮಗುವನ್ನು ಅಪಹರಣ ಮಾಡಿದ್ದ ವೃದ್ಧೆಯನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಘಟನೆ ವಿವರ…
ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ ಮಲಗಿದ್ದ ಮಗುವನ್ನು ವೃದ್ಧೆಯೊಬ್ಬರು ಅಪಹರಣ ಮಾಡಿದ್ದಾರೆ. ತಾಯಿ ಎಚ್ಚರಗೊಂಡಾಗ ಪಕ್ಕದಲ್ಲಿ ಮಲಗಿದ್ದ ಮಗು ನಾಪತ್ತೆಯಾಗಿದ್ದನ್ನು ಗಮನಿಸಿ, ಕೂಡಲೇ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ: ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಸೆಂಟರ್‌ ಮೇಲೆ ದಾಳಿ: ಡಾ.ಪಿ.ಸಿ.ಕುಮಾರಸ್ವಾಮಿ ಹೇಳಿದ್ದಿಷ್ಟು.!

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಕಾರ್ಯಾರಂಭ ಮಾಡಿದಾಗ, ೫೦ ವರ್ಷದ ವೃದ್ಧೆ ಮಗು ಎತ್ತಿಕೊಂಡು ಹೋಗುವ ದೃಶ್ಯ ಸೆರೆಯಾಗಿದೆ. ಕೂಟಲೇ ರೈಲ್ವೇ ನಿಲ್ದಾಣದಲ್ಲಿಯೇ ಇದ್ದ ವೃದ್ಧೆಯನ್ನು ಬಂಧಿಸಿ ಮಗು ವಶಕ್ಕೆ ಪಡೆದ ಪೊಲೀಸರು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.

ಆರೋಪಿ ಹಾಸನ ಮೂಲದ ನಂದಿನಿ ಎಂದು ಗುರುತು ಪತ್ತೆಯಾಗಿದ್ದು, ಆರೋಪಿ ವಿರುದ್ಧ ದೂರು ದಾಖಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago