ಮೈಸೂರು : ನಗರದ ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ ಮಲಗಿದ್ದ ಮಗುವನ್ನು ಅಪಹರಣ ಮಾಡಿದ್ದ ವೃದ್ಧೆಯನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಘಟನೆ ವಿವರ…
ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ ಮಲಗಿದ್ದ ಮಗುವನ್ನು ವೃದ್ಧೆಯೊಬ್ಬರು ಅಪಹರಣ ಮಾಡಿದ್ದಾರೆ. ತಾಯಿ ಎಚ್ಚರಗೊಂಡಾಗ ಪಕ್ಕದಲ್ಲಿ ಮಲಗಿದ್ದ ಮಗು ನಾಪತ್ತೆಯಾಗಿದ್ದನ್ನು ಗಮನಿಸಿ, ಕೂಡಲೇ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ: ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಸೆಂಟರ್ ಮೇಲೆ ದಾಳಿ: ಡಾ.ಪಿ.ಸಿ.ಕುಮಾರಸ್ವಾಮಿ ಹೇಳಿದ್ದಿಷ್ಟು.!
ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಕಾರ್ಯಾರಂಭ ಮಾಡಿದಾಗ, ೫೦ ವರ್ಷದ ವೃದ್ಧೆ ಮಗು ಎತ್ತಿಕೊಂಡು ಹೋಗುವ ದೃಶ್ಯ ಸೆರೆಯಾಗಿದೆ. ಕೂಟಲೇ ರೈಲ್ವೇ ನಿಲ್ದಾಣದಲ್ಲಿಯೇ ಇದ್ದ ವೃದ್ಧೆಯನ್ನು ಬಂಧಿಸಿ ಮಗು ವಶಕ್ಕೆ ಪಡೆದ ಪೊಲೀಸರು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.
ಆರೋಪಿ ಹಾಸನ ಮೂಲದ ನಂದಿನಿ ಎಂದು ಗುರುತು ಪತ್ತೆಯಾಗಿದ್ದು, ಆರೋಪಿ ವಿರುದ್ಧ ದೂರು ದಾಖಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…