ಮೈಸೂರು ನಗರ

ಮೈಸೂರು: ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ

ಮೈಸೂರು: ತಾಲೂಕಿನ ಮೆಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಶುಕ್ರವಾರ(ಜು.26) ಡೆಂಗ್ಯೂ ನಿಯಂತ್ರಣ ಜಾಗೃತಿ ಕಾರ್ಯಕ್ರಮ ನಡೆಯಿತು.

ಡೆಂಗ್ಯೂ ನಿಯಂತ್ರಣದ ಬಗ್ಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ರೋಗ ಲಕ್ಷಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ಶುಕ್ರವಾರ ಡ್ರೈ ಡೇ ಎಂದು ಗೊತ್ತುಪಡಿಸಲಾಗಿದೆ. ಈ ಮಾದರಿಯಲ್ಲಿ ಇಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ ಅವರ ನೇತೃತ್ವದಲ್ಲಿ ಡ್ರೈ ಡೇ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರಲ್ಲಿ ಡೆಂಗ್ಯೂ ನಿಯಂತ್ರಣದ ಬಗ್ಗೆ ಅರಿವು ಮೂಡಿಸಲಾಯಿತು.

ಪ್ರತಿ ಮನೆ ಮನೆಗೂ ತಲುಪಿದ ಅಧಿಕಾರಿಗಳು ಆರೋಗ್ಯದ ಬಗ್ಗೆ ಸಲಹೆಗಳನ್ನು ನೀಡಿದರು. ಜತೆಗೆ ಸುತ್ತಮುತ್ತಲಿವ ವಾತಾವರಣವನ್ನು ಸ್ವಚ್ಚವಾಗಿಟ್ಟುಕೊಳ್ಳುವಂತೆ ಹೇಳಿ, ಮನೆಯ ಅಕ್ಕ ಪಕ್ಕ ನೀರು ನಿಲ್ಲದಂತೆ ಎಚ್ಚರವಹಿಸುವಂತೆ ತಿಳಿಸಿದರು.

ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಹಾಗೂ ಜಿಲ್ಲಾ ಕ್ಷಿಪ್ರ ಪಡೆ ತಂಡದವರು ಭಾಗವಹಿಸಿದ್ದರು.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

7 seconds ago

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

12 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

13 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

14 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

15 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

15 hours ago