ಮೈಸೂರು ನಗರ

ಮೈಸೂರು ಬಂದ್: ಮಾಜಿ ಶಾಸಕ ಸೋಮಶೇಖರ್‌ ಪ್ರತಿಕ್ರಿಯೆ

ಮೈಸೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಖಂಡಿಸಿ ಮೈಸೂರಿನಲ್ಲಿ ಬಂದ್‌ ಕರೆ ನೀಡಲಾಗಿತ್ತು. ಇದೀಗ ಮೈಸೂರು ಬಂದ್‌ನಲ್ಲಿ ಪಾಲ್ಗೊಂಡು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಇಂದು(ಜನವರಿ.7) ಈ ಕುರಿತು ಮೈಸೂರು ಬಂದ್‌ಗೆ ಬೆಂಬಲ ಸೂಚಿಸಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಭಾರತ ದೇಶದಲ್ಲಿ ಅಸ್ಪೃಶ್ಯತೆ, ಬಡತನ ಮತ್ತು ಅಸಮಾನತೆಯಿದ್ದರೂ ಇಂದು ದೇಶ ಶಾಂತಿಯುತವಾಗಿ ನೆಮ್ಮದಿಯಾಗಿದೆ. ಅದಕ್ಕೆ ಪ್ರಮುಖ ಕಾರಣವೆಂದರೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ನೀಡಿದಂತಹ ಸಂವಿಧಾನವಾಗಿದೆ. ಇತಂಹ ಸಂವಿಧಾನವನ್ನು ನೀಡಿದಂತಹ ಬಾಬಾ ಸಾಹೇಬ ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್‌ ಶಾ ಅವರು ಸಂಸತ್‌ ಆವರಣದಲ್ಲಿ ಅಸಹನೆ ಮಾತನಾಡಿರುವುದು ತೀವ್ರ ಖಂಡನೀಯವಾಗಿದೆ. ಹೀಗಾಗಿ ಪ್ರಗತಿ ಪರ ಸಂಘಟನೆಗಳಿಂದ ಅಮಿತ್‌ ಶಾ ವಿರುದ್ಧ ಮೈಸೂರು ಬಂದ್‌ಗೆ ಕರೆ ನೀಡಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇನ್ನೂ ಈ ಬಂದ್‌ಗೆ ನಗರದಲ್ಲಿ ಉತ್ತಮ ಸ್ವಯಂ ಘೋಷಿತ ಬೆಂಬಲ ವ್ಯಕ್ತವಾಗುತ್ತಿದೆ. ಇದಕ್ಕೆ ಪೂರಕವಾಗಿ ಮಳಿಗೆಗಳು, ಸಾರಿಗೆ ಬಸ್‌, ಮಾರುಕಟ್ಟೆಗಳು, ಮೈಸೂರು ಸಿಟಿ ಕಾರ್ಪೋರೇಷನ್ ಹಾಗೂ ಬ್ಯಾಂಕ್ ಸಹ ತಮ್ಮ ಸೇವೆಗಳನ್ನು ನಿಲ್ಲಿಸುತ್ತಿವೆ ಎಂದು ತಿಳಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

1 hour ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

2 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

2 hours ago

ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ

ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…

2 hours ago

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…

2 hours ago

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…

2 hours ago