ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಖಂಡಿಸಿ ಮೈಸೂರಿನಲ್ಲಿ ಬಂದ್ ಕರೆ ನೀಡಲಾಗಿತ್ತು. ಇದೀಗ ಮೈಸೂರು ಬಂದ್ನಲ್ಲಿ ಪಾಲ್ಗೊಂಡು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಇಂದು(ಜನವರಿ.7) ಈ ಕುರಿತು ಮೈಸೂರು ಬಂದ್ಗೆ ಬೆಂಬಲ ಸೂಚಿಸಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಭಾರತ ದೇಶದಲ್ಲಿ ಅಸ್ಪೃಶ್ಯತೆ, ಬಡತನ ಮತ್ತು ಅಸಮಾನತೆಯಿದ್ದರೂ ಇಂದು ದೇಶ ಶಾಂತಿಯುತವಾಗಿ ನೆಮ್ಮದಿಯಾಗಿದೆ. ಅದಕ್ಕೆ ಪ್ರಮುಖ ಕಾರಣವೆಂದರೆ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದಂತಹ ಸಂವಿಧಾನವಾಗಿದೆ. ಇತಂಹ ಸಂವಿಧಾನವನ್ನು ನೀಡಿದಂತಹ ಬಾಬಾ ಸಾಹೇಬ ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಅವರು ಸಂಸತ್ ಆವರಣದಲ್ಲಿ ಅಸಹನೆ ಮಾತನಾಡಿರುವುದು ತೀವ್ರ ಖಂಡನೀಯವಾಗಿದೆ. ಹೀಗಾಗಿ ಪ್ರಗತಿ ಪರ ಸಂಘಟನೆಗಳಿಂದ ಅಮಿತ್ ಶಾ ವಿರುದ್ಧ ಮೈಸೂರು ಬಂದ್ಗೆ ಕರೆ ನೀಡಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಇನ್ನೂ ಈ ಬಂದ್ಗೆ ನಗರದಲ್ಲಿ ಉತ್ತಮ ಸ್ವಯಂ ಘೋಷಿತ ಬೆಂಬಲ ವ್ಯಕ್ತವಾಗುತ್ತಿದೆ. ಇದಕ್ಕೆ ಪೂರಕವಾಗಿ ಮಳಿಗೆಗಳು, ಸಾರಿಗೆ ಬಸ್, ಮಾರುಕಟ್ಟೆಗಳು, ಮೈಸೂರು ಸಿಟಿ ಕಾರ್ಪೋರೇಷನ್ ಹಾಗೂ ಬ್ಯಾಂಕ್ ಸಹ ತಮ್ಮ ಸೇವೆಗಳನ್ನು ನಿಲ್ಲಿಸುತ್ತಿವೆ ಎಂದು ತಿಳಿಸಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…