ಮೈಸೂರು ನಗರ

ಮೈಸೂರು ಬಂದ್: ಮೈಸೂರು ವಕೀಲರ ಸಂಘ ಬೆಂಬಲ

ಮೈಸೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಖಂಡಿಸಿ ಮೈಸೂರಿನಲ್ಲಿ ಬಂದ್‌ ಕರೆ ನೀಡಲಾಗಿತ್ತು. ಇದೀಗ ಪ್ರತಿಭಟನೆಗೆ ವಕೀಲರು ಬೆಂಬಲ ಸೂಚಿಸಿದ್ದಾರೆ.

ನಗರದಲ್ಲಿ ಇಂದು(ಜನವರಿ.7) ಪ್ರಗತಿ ಪರ ಸಂಘಟನೆಗಳ ವತಿಯಿಂದ ಮೈಸೂರು ಬಂದ್‌ಗೆ ಕರೆ ನೀಡಿವೆ. ಈ ಬಂದ್‌ಗೆ ಬೆಂಬಲ ಸೂಚಿಸಿ ಈಗಾಗಲೇ ಮಾರುಕಟ್ಟೆಗಳು, ನಗರ ಮತ್ತು ಗ್ರಾಮಾಂತರ ಬಸ್‌ ನಿಲ್ದಾಣಗಳ ಸಾರಿಗೆ ವ್ಯವಸ್ಥೆ, ಅಂಗಡಿ, ಮಳಿಗೆಗಳು ಹಾಗೂ ಚಿಕ್ಕಗಡಿಯಾರ ಸೇರಿದಂತೆ ನಗರದದ್ಯಾಂತ ಅನೇಕ ಕಡೆಗಳಲ್ಲಿ ಬಂದ್‌ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಅಂದರಂತೆಯೇ ವಕೀಲ ಸಂಘಟನೆಗಳು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿವೆ.

ಮೈಸೂರು ಬಂದ್‌ ಹಿನ್ನೆಲೆಯಲ್ಲಿ ಅಂಬೇಡ್ಕರ್‌ ಅವರ ವಿರುದ್ಧ ಅಮಿತ್‌ ಶಾರವರ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಪ್ರಗತಿ ಪರ ಸಂಘಟನೆಗಳಂತೆ ಮೈಸೂರು ವಕೀಲ ಸಂಘವೂ ಸಹ ಬೈಕ್‌ ರ್ಯಾಲಿ ಮುಖಾಂತರ ಪ್ರತಿಭಟನೆಯಲ್ಲಿ ಭಾಗವಹಿಸಿ ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿವೆ.

 

ಅರ್ಚನ ಎಸ್‌ ಎಸ್

Recent Posts

ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌…

21 mins ago

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…

34 mins ago

ನಂಜನಗೂಡು: ಗುಜರಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲು

ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…

47 mins ago

ಮೈಸೂರಿನಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸ್ಪಷ್ಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಕಮಿಷನರ್‌ ಸೀಮಾ…

1 hour ago

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

2 hours ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

5 hours ago