Fraud cases on the rise in Mandya district
ಮೈಸೂರು : ವ್ಯಕ್ತಿಯೊಬ್ಬ ಕೆಲಸ ಬಿಟ್ಟ ನಂತರವೂ ಬ್ಯಾಂಕ್ನ ಗ್ರಾಹಕರಿಂದ ಹಣ ಸಂಗ್ರಹಿಸಿ ಬ್ಯಾಂಕ್ಗೆ 47,72ಲಕ್ಷ ರೂ. ಹಣವನ್ನು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.
ನಂಜನಗೂಡಿನ ನಿವಾಸಿ ಮಹದೇವ ಸ್ವಾಮಿ ಎಂಬಾತನೇ ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ವಂಚಿಸಿರುವ ವ್ಯಕ್ತಿ. ಮಹದೇವ ಸ್ವಾಮಿ ಈ ಹಿಂದೆ ಇಂಡಸ್ ಬ್ಯಾಂಕ್ನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯವಸ್ಥಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದನು. ಕಳೆದ ಮೇ ತಿಂಗಳಿನಿಂದ ಆತ ಕೆಲಸಕ್ಕೆ ಬಂದಿರಲಿಲ್ಲ. ಅವರ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಆಗಿತ್ತು. ಹೀಗಾಗಿ ಅನುಮಾನಗೊಂಡ ಅವರು ಮಹದೇವಸ್ವಾಮಿ ಅವರು ಈ ಹಿಂದೆ ವಾಹನಗಳ ಸಾಲಗಳ ವಸೂಲಾತಿ ಮಾಡುತ್ತಿದ್ದವರ ಖಾತೆಗಳನ್ನು ಪರಿಶೀಲಿಸಿದ ವೇಳೆ ಹಲವು ಮಂದಿ ಸಾಲದ ಕಂತು ಕಟ್ಟಿಲ್ಲದಿರುವುದು ಪರಿಶೀಲನೆ ವೇಳೆ ತಿಳಿದುಬಂದಿದೆ.
ಹೀಗಾಗಿ ಲೆಕ್ಕ ಪತ್ರಗಳನ್ನು ಪರಿಶೀಲಿಸಿದ ವೇಳೆ ಆತ ೪೭,೭೨,೮೧೦ ರೂ. ಹಣವನ್ನು ಗ್ರಾಹಕರಿಂದ ಸಂಗ್ರಹಿಸಿ ಬ್ಯಾಂಕ್ಗೆ ಪಾವತಿಸಿಲ್ಲದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಬ್ಯಾಂಕ್ನ ಅಧಿಕಾರಿಗಳು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ:-ಕಾಫಿತೋಟದಲ್ಲಿ ಕಾಣೆಯಾಗಿದ್ದ 2 ವರ್ಷದ ಬಾಲಕಿ ; ಪತ್ತೆಹಚ್ಚಿದ ಶ್ವಾನ !
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…