Fraud cases on the rise in Mandya district
ಮೈಸೂರು : ವ್ಯಕ್ತಿಯೊಬ್ಬ ಕೆಲಸ ಬಿಟ್ಟ ನಂತರವೂ ಬ್ಯಾಂಕ್ನ ಗ್ರಾಹಕರಿಂದ ಹಣ ಸಂಗ್ರಹಿಸಿ ಬ್ಯಾಂಕ್ಗೆ 47,72ಲಕ್ಷ ರೂ. ಹಣವನ್ನು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.
ನಂಜನಗೂಡಿನ ನಿವಾಸಿ ಮಹದೇವ ಸ್ವಾಮಿ ಎಂಬಾತನೇ ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ವಂಚಿಸಿರುವ ವ್ಯಕ್ತಿ. ಮಹದೇವ ಸ್ವಾಮಿ ಈ ಹಿಂದೆ ಇಂಡಸ್ ಬ್ಯಾಂಕ್ನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯವಸ್ಥಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದನು. ಕಳೆದ ಮೇ ತಿಂಗಳಿನಿಂದ ಆತ ಕೆಲಸಕ್ಕೆ ಬಂದಿರಲಿಲ್ಲ. ಅವರ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಆಗಿತ್ತು. ಹೀಗಾಗಿ ಅನುಮಾನಗೊಂಡ ಅವರು ಮಹದೇವಸ್ವಾಮಿ ಅವರು ಈ ಹಿಂದೆ ವಾಹನಗಳ ಸಾಲಗಳ ವಸೂಲಾತಿ ಮಾಡುತ್ತಿದ್ದವರ ಖಾತೆಗಳನ್ನು ಪರಿಶೀಲಿಸಿದ ವೇಳೆ ಹಲವು ಮಂದಿ ಸಾಲದ ಕಂತು ಕಟ್ಟಿಲ್ಲದಿರುವುದು ಪರಿಶೀಲನೆ ವೇಳೆ ತಿಳಿದುಬಂದಿದೆ.
ಹೀಗಾಗಿ ಲೆಕ್ಕ ಪತ್ರಗಳನ್ನು ಪರಿಶೀಲಿಸಿದ ವೇಳೆ ಆತ ೪೭,೭೨,೮೧೦ ರೂ. ಹಣವನ್ನು ಗ್ರಾಹಕರಿಂದ ಸಂಗ್ರಹಿಸಿ ಬ್ಯಾಂಕ್ಗೆ ಪಾವತಿಸಿಲ್ಲದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಬ್ಯಾಂಕ್ನ ಅಧಿಕಾರಿಗಳು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ:-ಕಾಫಿತೋಟದಲ್ಲಿ ಕಾಣೆಯಾಗಿದ್ದ 2 ವರ್ಷದ ಬಾಲಕಿ ; ಪತ್ತೆಹಚ್ಚಿದ ಶ್ವಾನ !
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…