ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಡ್ರಗ್ಸ್ ಮುಕ್ತ ಮೈಸೂರು ಮಾಡಲು ಇಂದು ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ರಾಮಸ್ವಾಮಿ ವೃತ್ತದವರೆಗೆ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಅವಧೂತ ವಿನಯ್ ಗುರೂಜಿ ಚಾಲನೆ ನೀಡಿದರು.
ಇದನ್ನೂ ಓದಿ: ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಪ್ರಮಾಣವಚನ ಸ್ವೀಕಾರ
ಬಿಜೆಪಿ ಮುಖಂಡ ಹಾಗೂ ಸಮಾಜ ಸೇವಕ ಡಾ.ಶುಶ್ರುತ್ ಗೌಡ ನೇತೃತ್ವದಲ್ಲಿ ನಡೆದ ರ್ಯಾಲಿ ಕಾರ್ಯಕ್ರಮದಲ್ಲಿ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಸೇರಿದಂತೆ ನಗರದ ವಿವಿಧ ಸೇವಾ ಸಂಸ್ಥೆಗಳ ಮುಖಂಡರು ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಅವಧೂತ ವಿನಯ್ ಗುರೂಜಿ ಅವರು, ನಮ್ಮ ದೇಶದ ಆಸ್ತಿ ಅಂದ್ರೆ ಅದು ಯುವಕರು. ಯುವಕರು ಡ್ರಗ್ಸ್ಗೆ ಅಡಿಟ್ ಆಗದಂತೆ ನೋಡಿಕೊಳ್ಳಬೇಕು. ಇಂದು ಡ್ರಗ್ಸ್ ಮುಕ್ತ ಮೈಸೂರಿಗೆ ಮುನ್ನುಡಿ ಬರೆದಿದ್ದೇವೆ. ಈ ಹಿಂದೆ ಮೈಸೂರಿನಲ್ಲಿ ಡ್ರಗ್ಸ್ ಸಿಕ್ಕಿದ ಪ್ರಕರಣ ನೋಡಿದ್ದೇವೆ. ಹಾಗಾಗಿ ಡ್ರಗ್ಸ್ ಫ್ರೀ ಮೈಸೂರು ಮಾಡಲು ಎಲ್ಲರ ಸಹಕಾರ ಅತ್ಯಗತ್ಯ ಎಂದು ಕರೆ ನೀಡಿದರು.





