ಮೈಸೂರು: ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ನನ್ನನ್ನು ನಿವೃತ್ತಿ ಆಗಬೇಕೆಂದು ಸಿದ್ದರಾಮಯ್ಯ ಹೇಳಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ. ಸಿಎಂ ಸಿದ್ದರಾಮಯ್ಯನವರೇ ನೀವೇ ಮನೆಗೆ ಹೋಗುವ ಪರಿಸ್ಥಿತಿ ಬಂದಿದೆ. ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ನಾವು ನಿದ್ದೆ ಮಾಡಲ್ಲ ಎಂದು ಕಿಡಿಕಾರಿದರು.
ಇನ್ನು ರಾಜ್ಯದಲ್ಲಿ ಸರ್ಕಾರ ದಿವಾಳಿಯಾಗಿದೆ. ಸರ್ಕಾರ ಬಂದು ಒಂದೂವರೆ ವರ್ಷ ಆಗಿದೆ. ಆದ್ರೂ ರಾಜ್ಯದಲ್ಲಿ ಒಂದಾದ್ರು ಕಾರ್ಯಕ್ರಮಗಳು ಆಗಿವೆಯಾ ಎಂದು ಪ್ರಶ್ನಿಸಿದರು.
ಇನ್ನು ಡಿ.ಕೆ.ಶಿವಕುಮಾರ್ ತಾವು ಕಲ್ಲುಬಂಡೆ ಎಂದು ಹೇಳಿಕೊಂಡು ಓಡಾಡುತ್ತಾರೆ. ಡಿಕೆಶಿ, ನಿಮ್ಮ ಪಾಪದ ಕೊಡ ತುಂಬಿ ತುಳುಕುತ್ತಾ ಇದೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಹಾಗೂ ಡಿಸಿಎಂ ಇಬ್ಬರೂ ಲೂಟಿಕೋರರು. ನಿಮ್ಮನ್ನು ರಾಜ್ಯದ ಜನತೆ ಶೀಘ್ರದಲ್ಲೇ ಮನೆಗೆ ಕಳುಹಿಸುತ್ತಾರೆ. ಈಗ ಚುನಾವಣೆ ನಡೆದರೆ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಬರೋದು ನಿಶ್ಚಿತ ಎಂದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…