ಮೈಸೂರು ನಗರ

ಮೈಸೂರು ಬ್ರಾಂಡ್‌ ಜನಪ್ರಿಯತೆಗೆ ಸರ್.ಎಂ.ವಿ ಅವರ ಶಾಶ್ವತ ಯೋಜನೆ ಕಾರಣ: ಟಿ ಎಸ್. ಶ್ರೀವತ್ಸ

ಮೈಸೂರು: ಮೈಸೂರು ಸಂಸ್ಥಾನದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಅಭಿವೃದ್ಧಿಗೆ ದಿವಾನ್ ಸರ್.ಎಂ ವಿಶ್ವೇಶ್ವರಯ್ಯ ಅವರು ಶತಮಾನದ ಹಿಂದೆಯೇ ಶಾಶ್ವತ ಯೋಜನೆ ರೂಪಿಸಿದ್ದರು ಎಂದು ಶಾಸಕ  ಟಿ ಎಸ್. ಶ್ರೀವತ್ಸ ಹೇಳಿದರು.

ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಸರ್ ಎಂ ವಿಶ್ವೇಶ್ವರಯ್ಯ ಅಭಿಮಾನಿ ಬಳಗದ ವತಿಯಿಂದ ಭಾರತ ರತ್ನ ದಿವಾನ್ ಸರ್ ಎಂ ವಿಶ್ವೇಶ್ವರಯ್ಯ ರವರ 163ನೇ ಜಯಂತಿಯ ಅಂಗವಾಗಿ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ  ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಾರ್ವಜನಿಕರಿಗೆ ಮೈಸೂರು ಪಾಕ್ ವಿಚರಿಸಿ ಮಾತನಾಡಿದರು.

ಮೈಸೂರು ಬ್ರಾಂಡ್ ಇವತ್ತು ದೇಶದಲ್ಲಿ ಜನಪ್ರಿಯವಾಗಲು ಸ್ಥಳೀಯ ಮಾರುಕಟ್ಟೆಯ ಮೂಲಕ ಗ್ರಾಮೀಣ ರೈತರನ್ನ, ವ್ಯಾಪಾರಸ್ಥರು ಉದ್ಯಮಿಗಳನ್ನ ಒಗ್ಗೂಡಿಸಿ ಮೈಸೂರಿನ ವಿಶೇಷತೆಯನ್ನ ಪ್ರೋತ್ಸಾಹಿಸಿದವರು ಸರ್. ಎಂ ವಿಶ್ವೇಶ್ವರಯ್ಯ ಅವರು, ಇಂದಿನ ಯುವ ಪೀಳಿಗೆ  ಅವರ ಜೀವನಚರಿತ್ರೆ  ತಿಳಿದುಕೊಂಡು ಅವರ ಹಾದಿಯಲ್ಲಿ ಸಾಗಬೇಕು ಎಂದು ಸಲಹೆ ನೀಡಿದರು.

ಸರ್.‌ ಎಂ.ವಿಶ್ವೇಶ್ವರಯ್ಯ ಹೆಸರಲ್ಲಿ ಅಧ್ಯಯನ ಪೀಠ ಸ್ಥಾಪಿಸಿ: ಶ್ರೀಕಂಠಕುಮಾರ್

ಅಂಣಕಾರರಾದ ನಂ.ಶ್ರೀಕಂಠಕುಮಾರ್ ಮಾತನಾಡಿ ಭಾರತರತ್ನ ಸರ್. ಎಂ ವಿಶ್ವೇಶ್ವರಯ್ಯ ಅವರು ಮೈಸೂರು ವಿಶ್ವವಿದ್ಯಾನಿಲಯ, ಕೆಆರ್ ಎಸ್, ಮೈಸೂರು ಸ್ಯಾಂಡಲ್, ಕನ್ನಡ ಸಾಹಿತ್ಯ ಪರಿಷತ್, ಭದ್ರಾವತಿ ಉಕ್ಕಿನ ಕಾರ್ಖಾನೆ ಸೇರಿದಂತೆ ಹಲವಾರು ಯೋಜನೆಗಳನ್ನ ಕಾರ್ಯರೂಪಕ್ಕೆ ಬರಲು ಕಾರಣರಾದರು. ಹೀಗಾಗಿ ಅಂತಹ ಮಹಾನ್‌ ವ್ಯಕ್ತಿಯ ಹೆಸರಲ್ಲಿ  ಅಧ್ಯಯನ ಪೀಠ ಸ್ಥಾಪಿಸಲು ಸರ್ಕಾರ ಮುಂದಾಗಬೇಕು ಎಂದರು.

 

ಇದೇ ಸಂದರ್ಭದಲ್ಲಿ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿಟಿ. ಪ್ರಕಾಶ್, ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷರಾದ ಕೆ ಆರ್ ಸತ್ಯನಾರಾಯಣ್, ಮಾಜಿನಗರ ಪಾಲಿಕಾ ಸದಸ್ಯರಾದ ಮಾ ವಿ ರಾಮ್ ಪ್ರಸಾದ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅರ್ಚಕರ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ,ನಿರೂಪಕ ಅಜಯ್ ಶಾಸ್ತ್ರಿ, ವಿಜಯ್ ಕುಮಾರ್, ಕೇಬಲ್ ವಿಜಿ, ಪ್ರದೀಪ್ ಕುಮಾರ್,ಸೂರಜ್, ಸದಾಶಿವ್, ಗಣೇಶ್, ವಿಘ್ನೇಶ್ವರ ಭಟ್, ಬ್ರಹ್ಮಚಾರ್, ಶ್ರೀನಿವಾಸ್, ಮಿರ್ಲೆ ಪನೀಶ್, ರಾಘವೇಂದ್ರ, ಹಾಗೂ ಇನ್ನಿತರರು ಹಾಜರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

2 hours ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

2 hours ago

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…

2 hours ago

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…

2 hours ago

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

4 hours ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

4 hours ago