ಮೈಸೂರು ನಗರ

ಮೈಸೂರು ಬ್ರಾಂಡ್‌ ಜನಪ್ರಿಯತೆಗೆ ಸರ್.ಎಂ.ವಿ ಅವರ ಶಾಶ್ವತ ಯೋಜನೆ ಕಾರಣ: ಟಿ ಎಸ್. ಶ್ರೀವತ್ಸ

ಮೈಸೂರು: ಮೈಸೂರು ಸಂಸ್ಥಾನದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಅಭಿವೃದ್ಧಿಗೆ ದಿವಾನ್ ಸರ್.ಎಂ ವಿಶ್ವೇಶ್ವರಯ್ಯ ಅವರು ಶತಮಾನದ ಹಿಂದೆಯೇ ಶಾಶ್ವತ ಯೋಜನೆ ರೂಪಿಸಿದ್ದರು ಎಂದು ಶಾಸಕ  ಟಿ ಎಸ್. ಶ್ರೀವತ್ಸ ಹೇಳಿದರು.

ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಸರ್ ಎಂ ವಿಶ್ವೇಶ್ವರಯ್ಯ ಅಭಿಮಾನಿ ಬಳಗದ ವತಿಯಿಂದ ಭಾರತ ರತ್ನ ದಿವಾನ್ ಸರ್ ಎಂ ವಿಶ್ವೇಶ್ವರಯ್ಯ ರವರ 163ನೇ ಜಯಂತಿಯ ಅಂಗವಾಗಿ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ  ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಾರ್ವಜನಿಕರಿಗೆ ಮೈಸೂರು ಪಾಕ್ ವಿಚರಿಸಿ ಮಾತನಾಡಿದರು.

ಮೈಸೂರು ಬ್ರಾಂಡ್ ಇವತ್ತು ದೇಶದಲ್ಲಿ ಜನಪ್ರಿಯವಾಗಲು ಸ್ಥಳೀಯ ಮಾರುಕಟ್ಟೆಯ ಮೂಲಕ ಗ್ರಾಮೀಣ ರೈತರನ್ನ, ವ್ಯಾಪಾರಸ್ಥರು ಉದ್ಯಮಿಗಳನ್ನ ಒಗ್ಗೂಡಿಸಿ ಮೈಸೂರಿನ ವಿಶೇಷತೆಯನ್ನ ಪ್ರೋತ್ಸಾಹಿಸಿದವರು ಸರ್. ಎಂ ವಿಶ್ವೇಶ್ವರಯ್ಯ ಅವರು, ಇಂದಿನ ಯುವ ಪೀಳಿಗೆ  ಅವರ ಜೀವನಚರಿತ್ರೆ  ತಿಳಿದುಕೊಂಡು ಅವರ ಹಾದಿಯಲ್ಲಿ ಸಾಗಬೇಕು ಎಂದು ಸಲಹೆ ನೀಡಿದರು.

ಸರ್.‌ ಎಂ.ವಿಶ್ವೇಶ್ವರಯ್ಯ ಹೆಸರಲ್ಲಿ ಅಧ್ಯಯನ ಪೀಠ ಸ್ಥಾಪಿಸಿ: ಶ್ರೀಕಂಠಕುಮಾರ್

ಅಂಣಕಾರರಾದ ನಂ.ಶ್ರೀಕಂಠಕುಮಾರ್ ಮಾತನಾಡಿ ಭಾರತರತ್ನ ಸರ್. ಎಂ ವಿಶ್ವೇಶ್ವರಯ್ಯ ಅವರು ಮೈಸೂರು ವಿಶ್ವವಿದ್ಯಾನಿಲಯ, ಕೆಆರ್ ಎಸ್, ಮೈಸೂರು ಸ್ಯಾಂಡಲ್, ಕನ್ನಡ ಸಾಹಿತ್ಯ ಪರಿಷತ್, ಭದ್ರಾವತಿ ಉಕ್ಕಿನ ಕಾರ್ಖಾನೆ ಸೇರಿದಂತೆ ಹಲವಾರು ಯೋಜನೆಗಳನ್ನ ಕಾರ್ಯರೂಪಕ್ಕೆ ಬರಲು ಕಾರಣರಾದರು. ಹೀಗಾಗಿ ಅಂತಹ ಮಹಾನ್‌ ವ್ಯಕ್ತಿಯ ಹೆಸರಲ್ಲಿ  ಅಧ್ಯಯನ ಪೀಠ ಸ್ಥಾಪಿಸಲು ಸರ್ಕಾರ ಮುಂದಾಗಬೇಕು ಎಂದರು.

 

ಇದೇ ಸಂದರ್ಭದಲ್ಲಿ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿಟಿ. ಪ್ರಕಾಶ್, ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷರಾದ ಕೆ ಆರ್ ಸತ್ಯನಾರಾಯಣ್, ಮಾಜಿನಗರ ಪಾಲಿಕಾ ಸದಸ್ಯರಾದ ಮಾ ವಿ ರಾಮ್ ಪ್ರಸಾದ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅರ್ಚಕರ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ,ನಿರೂಪಕ ಅಜಯ್ ಶಾಸ್ತ್ರಿ, ವಿಜಯ್ ಕುಮಾರ್, ಕೇಬಲ್ ವಿಜಿ, ಪ್ರದೀಪ್ ಕುಮಾರ್,ಸೂರಜ್, ಸದಾಶಿವ್, ಗಣೇಶ್, ವಿಘ್ನೇಶ್ವರ ಭಟ್, ಬ್ರಹ್ಮಚಾರ್, ಶ್ರೀನಿವಾಸ್, ಮಿರ್ಲೆ ಪನೀಶ್, ರಾಘವೇಂದ್ರ, ಹಾಗೂ ಇನ್ನಿತರರು ಹಾಜರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

12 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

12 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

13 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

13 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

14 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

22 hours ago