ಮೈಸೂರು ನಗರ

ಮೈಸೂರು | ಕಾರು ಡಿಕ್ಕಿ ; ಪಾದಚಾರಿ ಸಾವು

ಮೈಸೂರು : ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿರುವ ಘಟನೆ ನಗರದ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ.

ಬನ್ನಿಮಂಟಪದಲ್ಲಿನ ಹನುಮಂತನಗರ ನಿವಾಸಿ ಮೊಹಮ್ಮದ್ ನದೀಂ(೩೪) ಮೃತಪಟ್ಟವರು. ಇವರು ನ.೧೯ ರಂದು ರಾತ್ರಿ ೧೧ ಗಂಟೆ ವೇಳೆಯಲ್ಲಿ ರಿಂಗ್ ರಸ್ತೆಯಲ್ಲಿ ನಾರಾಯಣ ಹೃದಯಾಲಯ ಆಸ್ಪತ್ರೆ ಕಡೆಗೆ ಹೋಗುತ್ತಿದ್ದಾಗ ದೇವೇಗೌಡ ವೃತ್ತದ ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು, ಪರಾರಿಯಾಗಿತ್ತು.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೊಹಮ್ಮದ್ ನದೀಂ ಅವರನ್ನು ತಕ್ಷಣ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ತಡರಾತ್ರಿ ಮೃತಪಟ್ಟಿದ್ದಾರೆ. ಅಪಘಾತವೆಸಗಿದ ಕಾರಿನ ನೋಂದಣಿ ಸಂಖ್ಯೆಯನ್ನು ಸ್ಥಳೀಯರು ಗುರುತು ಹಾಕಿಕೊಂಡಿದ್ದು, ಇದರ ಆಧಾರದಲ್ಲಿ ಮೃತರ ಸಹೋದರ ಎನ್.ಆರ್.ಸಂಚಾರ ಠಾಣೆಗೆ ದೂರು ನೀಡಿದ್ದಾರೆ.

ಇದನ್ನು ಓದಿ: ನಂಜನಗೂಡು| ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್‌ ಸವಾರ ಸಾವು

ಆಟೋ ಪಲ್ಟಿ : ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಗಾಯ

ಮೈಸೂರು: ಬೈಕ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡ ಆಟೋ ಪಲ್ಟಿಯಾಗಿದ್ದರಿಂದ ಇಂಜಿನಿಯರಿಂಗ್ ವಿದ್ಯಾರ್ಥಿನಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರದ ಎನ್.ಆರ್.ಮೊಹಲ್ಲಾದಲ್ಲಿ ಸಂಭವಿಸಿದೆ.

ಮೊದಲನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ, ನ.೧೯ರಂದು ಬೆಳಿಗ್ಗೆ ೭.೩೦ರ ವೇಳೆಯಲ್ಲಿ ರಾಜೇಂದ್ರ ನಗರದ ಮನೆಯಿಂದ ಕಾಲೇಜಿಗೆ ಆಟೋದಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಚಾಲಕನ ಅಜಾಗರೂಕತೆಯಿಂದಾಗಿ ಆಟೋ, ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು, ನಂತರ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.
ಘಟನೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಭುಜದ ಮೂಳೆ ಮುರಿದಿರುವುದರಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ತಂದೆ ನೀಡಿದ ದೂರಿನ ಅನ್ವಯ ಎನ್. ಆರ್.ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

1 hour ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

1 hour ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

2 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

2 hours ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

2 hours ago

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

3 hours ago