ಮೈಸೂರು ನಗರ

ಮೈಸೂರು | ಕಾರು ಡಿಕ್ಕಿ ; ಪಾದಚಾರಿ ಸಾವು

ಮೈಸೂರು : ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿರುವ ಘಟನೆ ನಗರದ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ.

ಬನ್ನಿಮಂಟಪದಲ್ಲಿನ ಹನುಮಂತನಗರ ನಿವಾಸಿ ಮೊಹಮ್ಮದ್ ನದೀಂ(೩೪) ಮೃತಪಟ್ಟವರು. ಇವರು ನ.೧೯ ರಂದು ರಾತ್ರಿ ೧೧ ಗಂಟೆ ವೇಳೆಯಲ್ಲಿ ರಿಂಗ್ ರಸ್ತೆಯಲ್ಲಿ ನಾರಾಯಣ ಹೃದಯಾಲಯ ಆಸ್ಪತ್ರೆ ಕಡೆಗೆ ಹೋಗುತ್ತಿದ್ದಾಗ ದೇವೇಗೌಡ ವೃತ್ತದ ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು, ಪರಾರಿಯಾಗಿತ್ತು.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೊಹಮ್ಮದ್ ನದೀಂ ಅವರನ್ನು ತಕ್ಷಣ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ತಡರಾತ್ರಿ ಮೃತಪಟ್ಟಿದ್ದಾರೆ. ಅಪಘಾತವೆಸಗಿದ ಕಾರಿನ ನೋಂದಣಿ ಸಂಖ್ಯೆಯನ್ನು ಸ್ಥಳೀಯರು ಗುರುತು ಹಾಕಿಕೊಂಡಿದ್ದು, ಇದರ ಆಧಾರದಲ್ಲಿ ಮೃತರ ಸಹೋದರ ಎನ್.ಆರ್.ಸಂಚಾರ ಠಾಣೆಗೆ ದೂರು ನೀಡಿದ್ದಾರೆ.

ಇದನ್ನು ಓದಿ: ನಂಜನಗೂಡು| ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್‌ ಸವಾರ ಸಾವು

ಆಟೋ ಪಲ್ಟಿ : ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಗಾಯ

ಮೈಸೂರು: ಬೈಕ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡ ಆಟೋ ಪಲ್ಟಿಯಾಗಿದ್ದರಿಂದ ಇಂಜಿನಿಯರಿಂಗ್ ವಿದ್ಯಾರ್ಥಿನಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರದ ಎನ್.ಆರ್.ಮೊಹಲ್ಲಾದಲ್ಲಿ ಸಂಭವಿಸಿದೆ.

ಮೊದಲನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ, ನ.೧೯ರಂದು ಬೆಳಿಗ್ಗೆ ೭.೩೦ರ ವೇಳೆಯಲ್ಲಿ ರಾಜೇಂದ್ರ ನಗರದ ಮನೆಯಿಂದ ಕಾಲೇಜಿಗೆ ಆಟೋದಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಚಾಲಕನ ಅಜಾಗರೂಕತೆಯಿಂದಾಗಿ ಆಟೋ, ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು, ನಂತರ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.
ಘಟನೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಭುಜದ ಮೂಳೆ ಮುರಿದಿರುವುದರಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ತಂದೆ ನೀಡಿದ ದೂರಿನ ಅನ್ವಯ ಎನ್. ಆರ್.ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

2 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

2 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…

2 hours ago

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

4 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

5 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

5 hours ago