ಮೈಸೂರು ನಗರ

ಮೈಸೂರು : ಸೆಸ್ಕ್‌ನಿಂದ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ

ಮೈಸೂರು, : ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್‌ ಬಾಕಿ ವಸೂಲಿಗೆ ಸೆಸ್ಕ್‌ನಿಂದ ಅಭಿಯಾನ ಕೈಗೊಳ್ಳಲಾಗುತ್ತಿದೆ.

ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದ ಗ್ರಾಹಕರಿಂದ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ.

ಕೆಲವು ಗ್ರಾಹಕರು, ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್‌ ಬಾಕಿ ಉಳಿಸಿಕೊಂಡಿರುವವರ ವಿದ್ಯುತ್ ಬಾಕಿ ವಸೂಲಿಗೆ ಸೆಸ್ಕ್‌ ನಿರ್ಧರಿಸಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಕಾರ ವಿದ್ಯುತ್ ಸರಬರಾಜಿನ, ವಿತರಣಾ ಲೈಸೆನ್ಸ್‌ದಾರರ ಷರತ್ತುಗಳು 2004 ಅನುಬಂಧ-04ರ ನಿಯಮ 4.18(ಜೆ) ಪ್ರಕಾರ “ಗ್ರಾಹಕರು ಬಿಲ್‌ ಪಾವತಿಗೆ ನೀಡಿರುವ ದಿನಾಂಕದೊಳಗೆ ಬಿಲ್‌ ಪಾವತಿಸದಿದ್ದರೆ, ನಿಗದಿತ ಗಡುವಿನ ದಿನಾಂಕದ ನಂತರ ಶುಲ್ಕ ಪಾವತಿಸದ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ನೀಡಿ, ಬಾಕಿ ಪಾವತಿಸದ ಕಾರಣಕ್ಕೆ ವಿದ್ಯುತ್ ಮೀಟರ್‌/ಮಾಪಕಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಲೈಸೆನ್ಸ್‌ದಾರರು ಹೊಂದಿರುತ್ತಾರೆ”. ಅಲ್ಲದೇ ನಿಯಮ 2.11ರ ಪ್ರಕಾರ “ಬಿಲ್‌ ವಿತರಿಸಿದ ಬಳಿಕ 15 ದಿನಗಳ ಅವಧಿ ಬಿಲ್‌ ಪಾವತಿಗೆ ಅಂತಿಮ ಗಡುವಾಗಿರುತ್ತದೆ.”

“ಗ್ರಾಹಕರಿಗೆ ನೀಡುವ ಮಾಸಿಕ ಬಿಲ್‌ನ ಹಿಂಬದಿಯ ಸೂಚನೆ 1ರಲ್ಲಿ ನಿಗದಿತ ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಈ ಬಿಲ್‌ ಅನ್ನೇ ವಿದ್ಯುತ್‌ ಸರಬರಾಜು ನಿಲ್ಲಿಸುವ 15 ದಿನಗಳ ನೋಟೀಸ್ ಎಂದು ಪರಿಗಣಿಸಬೇಕು ಎಂದು ನಮೂದಿಸಲಾಗಿದೆ ಹಾಗೂ ಹಿಂದಿನ ಬಾಕಿಗೆ ವಾಯ್ದೆ ದಿನಾಂಕ ಅನ್ವಯಿಸುವುದಿಲ್ಲ” ಎಂದು ತಿಳಿಸಲಾಗಿರುತ್ತದೆ.

ಇದನ್ನೂ ಓದಿ:-ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್ : ಸಚಿವ ಖಂಡ್ರೆ

ಈ ಹಿನ್ನೆಲೆಯಲ್ಲಿ ನವೆಂಬರ್‌ 14, 2025ರಂದು ಕಂದಾಯ ವಸೂಲಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲ ಪ್ರವರ್ಗದ ವಿದ್ಯುತ್‌ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ತಮ್ಮ ಮೀಟರ್‌/ಮಾಪಕಗಳ ವಿದ್ಯುತ್‌ ಶುಲ್ಕ ಬಾಕಿಯನ್ನು ನವೆಂಬರ್‌ 14, 2025 ರೊಳಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಅಧಿಕೃತ ನಗದು ಕೌಂಟರ್ ಅಥವಾ ಆನ್‌ ಲೈನ್‌ ಮೂಲಕ ಪಾವತಿಸುವಂತೆ ಕೋರಲಾಗಿದೆ.

ನಿಗದಿತ ದಿನಾಂಕದೊಳಗೆ ವಿದ್ಯುತ್‌ ಶುಲ್ಕ ಬಾಕಿ ಪಾವತಿಸದ ಮೀಟರ್‌/ಮಾಪಕಗಳಿಗೆ ನವೆಂಬರ್‌ 14, 2025ರ ನಂತರ ಯಾವುದೇ ಮುನ್ಸೂಚನೆ ನೀಡದೆ ವಿದ್ಯುತ್ ಕಡಿತಗೊಳಿಸುವುದು ಅನಿವಾರ್ಯವಾಗಿರುತ್ತದೆ. ಆದ್ದರಿಂದ ಗ್ರಾಹಕರು ಈ ಕ್ರಮಕ್ಕೆ ಆಸ್ಪದ ನೀಡದೆ ತಮ್ಮ ವಿದ್ಯುತ್‌ ಮೀಟರ್‌/ಮಾಪಕಗಳ ವಿದ್ಯುತ್‌ ಶುಲ್ಕದ ಬಾಕಿಯನ್ನು ತುರ್ತಾಗಿ ಪಾವತಿಸುವಂತೆ ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

“ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಮೀಟರ್‌/ಮಾಪಕಗಳಿಗೆ (ತುರ್ತು ಸೇವೆಗಳನ್ನು ಹೊರತುಪಡಿಸಿ,) ನಿಯಮಾನುಸಾರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಆದ್ದರಿಂದ ವಿದ್ಯುತ್‌‌ ಶುಲ್ಕ ಬಾಕಿ ಉಳಿಸಿಕೊಂಡಿರುವ ಗ್ರಾಹಕರು, ತುರ್ತಾಗಿ ತಮ್ಮ ವಿದ್ಯುತ್‌ ಸ್ಥಾವರದ ಬಾಕಿ ಪಾವತಿಸಿ ಇಲಾಖೆಯೊಂದಿಗೆ ಸಹಕರಿಸಬೇಕಿದೆ.
ಕೆ.ಎಂ. ಮುನಿಗೋಪಾಲ್‌ ರಾಜು,”
ವ್ಯವಸ್ಥಾಪಕ ನಿರ್ದೇಶಕರು, ಸೆಸ್ಕ್‌.

ಆಂದೋಲನ ಡೆಸ್ಕ್

Recent Posts

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

32 mins ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

1 hour ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

2 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

4 hours ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

4 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

4 hours ago