ಮೈಸೂರು, : ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್ ಬಾಕಿ ವಸೂಲಿಗೆ ಸೆಸ್ಕ್ನಿಂದ ಅಭಿಯಾನ ಕೈಗೊಳ್ಳಲಾಗುತ್ತಿದೆ.
ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದ ಗ್ರಾಹಕರಿಂದ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ.
ಕೆಲವು ಗ್ರಾಹಕರು, ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್ ಬಾಕಿ ಉಳಿಸಿಕೊಂಡಿರುವವರ ವಿದ್ಯುತ್ ಬಾಕಿ ವಸೂಲಿಗೆ ಸೆಸ್ಕ್ ನಿರ್ಧರಿಸಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಕಾರ ವಿದ್ಯುತ್ ಸರಬರಾಜಿನ, ವಿತರಣಾ ಲೈಸೆನ್ಸ್ದಾರರ ಷರತ್ತುಗಳು 2004 ಅನುಬಂಧ-04ರ ನಿಯಮ 4.18(ಜೆ) ಪ್ರಕಾರ “ಗ್ರಾಹಕರು ಬಿಲ್ ಪಾವತಿಗೆ ನೀಡಿರುವ ದಿನಾಂಕದೊಳಗೆ ಬಿಲ್ ಪಾವತಿಸದಿದ್ದರೆ, ನಿಗದಿತ ಗಡುವಿನ ದಿನಾಂಕದ ನಂತರ ಶುಲ್ಕ ಪಾವತಿಸದ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ನೀಡಿ, ಬಾಕಿ ಪಾವತಿಸದ ಕಾರಣಕ್ಕೆ ವಿದ್ಯುತ್ ಮೀಟರ್/ಮಾಪಕಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಲೈಸೆನ್ಸ್ದಾರರು ಹೊಂದಿರುತ್ತಾರೆ”. ಅಲ್ಲದೇ ನಿಯಮ 2.11ರ ಪ್ರಕಾರ “ಬಿಲ್ ವಿತರಿಸಿದ ಬಳಿಕ 15 ದಿನಗಳ ಅವಧಿ ಬಿಲ್ ಪಾವತಿಗೆ ಅಂತಿಮ ಗಡುವಾಗಿರುತ್ತದೆ.”
“ಗ್ರಾಹಕರಿಗೆ ನೀಡುವ ಮಾಸಿಕ ಬಿಲ್ನ ಹಿಂಬದಿಯ ಸೂಚನೆ 1ರಲ್ಲಿ ನಿಗದಿತ ದಿನದೊಳಗೆ ಬಿಲ್ ಪಾವತಿಸದಿದ್ದಲ್ಲಿ ಈ ಬಿಲ್ ಅನ್ನೇ ವಿದ್ಯುತ್ ಸರಬರಾಜು ನಿಲ್ಲಿಸುವ 15 ದಿನಗಳ ನೋಟೀಸ್ ಎಂದು ಪರಿಗಣಿಸಬೇಕು ಎಂದು ನಮೂದಿಸಲಾಗಿದೆ ಹಾಗೂ ಹಿಂದಿನ ಬಾಕಿಗೆ ವಾಯ್ದೆ ದಿನಾಂಕ ಅನ್ವಯಿಸುವುದಿಲ್ಲ” ಎಂದು ತಿಳಿಸಲಾಗಿರುತ್ತದೆ.
ಇದನ್ನೂ ಓದಿ:-ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್ : ಸಚಿವ ಖಂಡ್ರೆ
ಈ ಹಿನ್ನೆಲೆಯಲ್ಲಿ ನವೆಂಬರ್ 14, 2025ರಂದು ಕಂದಾಯ ವಸೂಲಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲ ಪ್ರವರ್ಗದ ವಿದ್ಯುತ್ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ತಮ್ಮ ಮೀಟರ್/ಮಾಪಕಗಳ ವಿದ್ಯುತ್ ಶುಲ್ಕ ಬಾಕಿಯನ್ನು ನವೆಂಬರ್ 14, 2025 ರೊಳಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧಿಕೃತ ನಗದು ಕೌಂಟರ್ ಅಥವಾ ಆನ್ ಲೈನ್ ಮೂಲಕ ಪಾವತಿಸುವಂತೆ ಕೋರಲಾಗಿದೆ.
ನಿಗದಿತ ದಿನಾಂಕದೊಳಗೆ ವಿದ್ಯುತ್ ಶುಲ್ಕ ಬಾಕಿ ಪಾವತಿಸದ ಮೀಟರ್/ಮಾಪಕಗಳಿಗೆ ನವೆಂಬರ್ 14, 2025ರ ನಂತರ ಯಾವುದೇ ಮುನ್ಸೂಚನೆ ನೀಡದೆ ವಿದ್ಯುತ್ ಕಡಿತಗೊಳಿಸುವುದು ಅನಿವಾರ್ಯವಾಗಿರುತ್ತದೆ. ಆದ್ದರಿಂದ ಗ್ರಾಹಕರು ಈ ಕ್ರಮಕ್ಕೆ ಆಸ್ಪದ ನೀಡದೆ ತಮ್ಮ ವಿದ್ಯುತ್ ಮೀಟರ್/ಮಾಪಕಗಳ ವಿದ್ಯುತ್ ಶುಲ್ಕದ ಬಾಕಿಯನ್ನು ತುರ್ತಾಗಿ ಪಾವತಿಸುವಂತೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
“ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಮೀಟರ್/ಮಾಪಕಗಳಿಗೆ (ತುರ್ತು ಸೇವೆಗಳನ್ನು ಹೊರತುಪಡಿಸಿ,) ನಿಯಮಾನುಸಾರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಆದ್ದರಿಂದ ವಿದ್ಯುತ್ ಶುಲ್ಕ ಬಾಕಿ ಉಳಿಸಿಕೊಂಡಿರುವ ಗ್ರಾಹಕರು, ತುರ್ತಾಗಿ ತಮ್ಮ ವಿದ್ಯುತ್ ಸ್ಥಾವರದ ಬಾಕಿ ಪಾವತಿಸಿ ಇಲಾಖೆಯೊಂದಿಗೆ ಸಹಕರಿಸಬೇಕಿದೆ.
ಕೆ.ಎಂ. ಮುನಿಗೋಪಾಲ್ ರಾಜು,”
ವ್ಯವಸ್ಥಾಪಕ ನಿರ್ದೇಶಕರು, ಸೆಸ್ಕ್.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…