ಮೈಸೂರು, : ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್ ಬಾಕಿ ವಸೂಲಿಗೆ ಸೆಸ್ಕ್ನಿಂದ ಅಭಿಯಾನ ಕೈಗೊಳ್ಳಲಾಗುತ್ತಿದೆ.
ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದ ಗ್ರಾಹಕರಿಂದ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ.
ಕೆಲವು ಗ್ರಾಹಕರು, ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್ ಬಾಕಿ ಉಳಿಸಿಕೊಂಡಿರುವವರ ವಿದ್ಯುತ್ ಬಾಕಿ ವಸೂಲಿಗೆ ಸೆಸ್ಕ್ ನಿರ್ಧರಿಸಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಕಾರ ವಿದ್ಯುತ್ ಸರಬರಾಜಿನ, ವಿತರಣಾ ಲೈಸೆನ್ಸ್ದಾರರ ಷರತ್ತುಗಳು 2004 ಅನುಬಂಧ-04ರ ನಿಯಮ 4.18(ಜೆ) ಪ್ರಕಾರ “ಗ್ರಾಹಕರು ಬಿಲ್ ಪಾವತಿಗೆ ನೀಡಿರುವ ದಿನಾಂಕದೊಳಗೆ ಬಿಲ್ ಪಾವತಿಸದಿದ್ದರೆ, ನಿಗದಿತ ಗಡುವಿನ ದಿನಾಂಕದ ನಂತರ ಶುಲ್ಕ ಪಾವತಿಸದ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ನೀಡಿ, ಬಾಕಿ ಪಾವತಿಸದ ಕಾರಣಕ್ಕೆ ವಿದ್ಯುತ್ ಮೀಟರ್/ಮಾಪಕಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಲೈಸೆನ್ಸ್ದಾರರು ಹೊಂದಿರುತ್ತಾರೆ”. ಅಲ್ಲದೇ ನಿಯಮ 2.11ರ ಪ್ರಕಾರ “ಬಿಲ್ ವಿತರಿಸಿದ ಬಳಿಕ 15 ದಿನಗಳ ಅವಧಿ ಬಿಲ್ ಪಾವತಿಗೆ ಅಂತಿಮ ಗಡುವಾಗಿರುತ್ತದೆ.”
“ಗ್ರಾಹಕರಿಗೆ ನೀಡುವ ಮಾಸಿಕ ಬಿಲ್ನ ಹಿಂಬದಿಯ ಸೂಚನೆ 1ರಲ್ಲಿ ನಿಗದಿತ ದಿನದೊಳಗೆ ಬಿಲ್ ಪಾವತಿಸದಿದ್ದಲ್ಲಿ ಈ ಬಿಲ್ ಅನ್ನೇ ವಿದ್ಯುತ್ ಸರಬರಾಜು ನಿಲ್ಲಿಸುವ 15 ದಿನಗಳ ನೋಟೀಸ್ ಎಂದು ಪರಿಗಣಿಸಬೇಕು ಎಂದು ನಮೂದಿಸಲಾಗಿದೆ ಹಾಗೂ ಹಿಂದಿನ ಬಾಕಿಗೆ ವಾಯ್ದೆ ದಿನಾಂಕ ಅನ್ವಯಿಸುವುದಿಲ್ಲ” ಎಂದು ತಿಳಿಸಲಾಗಿರುತ್ತದೆ.
ಇದನ್ನೂ ಓದಿ:-ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್ : ಸಚಿವ ಖಂಡ್ರೆ
ಈ ಹಿನ್ನೆಲೆಯಲ್ಲಿ ನವೆಂಬರ್ 14, 2025ರಂದು ಕಂದಾಯ ವಸೂಲಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲ ಪ್ರವರ್ಗದ ವಿದ್ಯುತ್ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ತಮ್ಮ ಮೀಟರ್/ಮಾಪಕಗಳ ವಿದ್ಯುತ್ ಶುಲ್ಕ ಬಾಕಿಯನ್ನು ನವೆಂಬರ್ 14, 2025 ರೊಳಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧಿಕೃತ ನಗದು ಕೌಂಟರ್ ಅಥವಾ ಆನ್ ಲೈನ್ ಮೂಲಕ ಪಾವತಿಸುವಂತೆ ಕೋರಲಾಗಿದೆ.
ನಿಗದಿತ ದಿನಾಂಕದೊಳಗೆ ವಿದ್ಯುತ್ ಶುಲ್ಕ ಬಾಕಿ ಪಾವತಿಸದ ಮೀಟರ್/ಮಾಪಕಗಳಿಗೆ ನವೆಂಬರ್ 14, 2025ರ ನಂತರ ಯಾವುದೇ ಮುನ್ಸೂಚನೆ ನೀಡದೆ ವಿದ್ಯುತ್ ಕಡಿತಗೊಳಿಸುವುದು ಅನಿವಾರ್ಯವಾಗಿರುತ್ತದೆ. ಆದ್ದರಿಂದ ಗ್ರಾಹಕರು ಈ ಕ್ರಮಕ್ಕೆ ಆಸ್ಪದ ನೀಡದೆ ತಮ್ಮ ವಿದ್ಯುತ್ ಮೀಟರ್/ಮಾಪಕಗಳ ವಿದ್ಯುತ್ ಶುಲ್ಕದ ಬಾಕಿಯನ್ನು ತುರ್ತಾಗಿ ಪಾವತಿಸುವಂತೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
“ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಮೀಟರ್/ಮಾಪಕಗಳಿಗೆ (ತುರ್ತು ಸೇವೆಗಳನ್ನು ಹೊರತುಪಡಿಸಿ,) ನಿಯಮಾನುಸಾರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಆದ್ದರಿಂದ ವಿದ್ಯುತ್ ಶುಲ್ಕ ಬಾಕಿ ಉಳಿಸಿಕೊಂಡಿರುವ ಗ್ರಾಹಕರು, ತುರ್ತಾಗಿ ತಮ್ಮ ವಿದ್ಯುತ್ ಸ್ಥಾವರದ ಬಾಕಿ ಪಾವತಿಸಿ ಇಲಾಖೆಯೊಂದಿಗೆ ಸಹಕರಿಸಬೇಕಿದೆ.
ಕೆ.ಎಂ. ಮುನಿಗೋಪಾಲ್ ರಾಜು,”
ವ್ಯವಸ್ಥಾಪಕ ನಿರ್ದೇಶಕರು, ಸೆಸ್ಕ್.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…