ಮೈಸೂರು ನಗರ

ಕೆಆರ್‌ಎಸ್ ರಸ್ತೆಗೆ ಪ್ರಿನ್ಸೆಸ್‌ ರಸ್ತೆಯೆಂದು ಎಲ್ಲೂ ಹೆಸರಿಲ್ಲ: ಪಾಲಿಕೆ ಆಯುಕ್ತ ಅಶಾದ್‌ ಸ್ಪಷ್ಟನೆ

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡಬೇಕೆಂಬ ಹಾಗೂ ಆ ರಸ್ತೆಗೆ ಪ್ರಿನ್ಸೆಸ್‌ ರಸ್ತೆಯೆಂದು ಹೆಸರಿಸಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಈ ಬಗ್ಗೆ ಕಡತಗಳನ್ನು ಪರಿಶೀಲನೆ ಮಾಡಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಅಶಾದ್‌ ಉರ್‌ ರೆಹಮಾನ್‌ ಷರೀಫ್‌ ಅವರು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಇಂದು(ಡಿಸೆಂಬರ್‌.31) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಇಡದ ಅವರು, ಪಾಲಿಕೆ ವತಿಯಿಂದ 1999 ರಿಂದ 2024ರವರೆಗಿನ ಎಲ್ಲಾ ಕಡತಗಳನ್ನು ಪರಿಶೀಲಿಸಲಾಗಿದೆ. ಆ ಕಡತಗಳಲ್ಲಿ ಕೆಆರ್‌ಎಸ್‌ ರಸ್ತೆಗೆ ಪ್ರಿನ್ಸೆಸ್‌ ರಸ್ತೆ ಎಂಬ ಹೆಸರಿತ್ತೆಂದು ಎಲ್ಲಿಯೂ ಕಂಡು ಬಂದಿಲ್ಲ, ಆ ರಸ್ತೆಗೆ ಯಾವ ಹೆಸರಿಲ್ಲ. ಈಗ ನಾವು 1964 ರಿಂದ 1999 ವರೆಗಿನ ಕಡತಗಳನ್ನು ಪರಿಶಿಲನೆ ಮಾಡುತ್ತಿದ್ದೇವೆ. ಅದು ಕೂಡ ಬಹುತೇಕ ಮುಕ್ತಾಯವಾಗಿದೆ. ಅಲ್ಲದೇ ಇನ್ನೂ 20 ವರ್ಷಗಳ ಕಡತಗಳ ಪರಿಶೀಲನೆ ಮಾತ್ರ ಬಾಕಿ ಇದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ವತಿಯಿಂದ ಈಗ ಪರಿಶಿಲನೆ ಮಾಡಿರುವ ಕಡತಗಳಲ್ಲಿ ಎಲ್ಲಿಯೂ ಸಹ ಪ್ರಿನ್ಸೆಸ್‌ ಹೆಸರಿನ ಬಗ್ಗೆ ಉಲ್ಲೇಖವಿಲ್ಲ. ನಾವು ಮೈಸೂರು ಮಹಾನಗರ ಪಾಲಿಕೆ 9 ವಲಯಗಳ ಆಯುಕ್ತರಿಂದ ಮಾಹಿತಿ ಪಡೆದಿದ್ದೇನೆ. ಅವರು ಸಹ ಕೆಆರ್‌ಎಸ್‌ ರಸ್ತೆಗೆ ಪ್ರಿನ್ಸೆಸ್‌ ಹೆಸರಿದೆ ಎಂಬುದಕ್ಕೆ ಯಾವ ಅಧಿಕೃತ ದಾಖಲೆಗಳಿಲ್ಲ ಎಂದು ಹೇಳಿದ್ದಾರೆ.

ನಮ್ಮ ವ್ಯಾಪ್ತಿಯ ದಾಖಲೆ ಪರಿಶೀಲನೆ ಬಹುತೇಕ ಮುಕ್ತಾಯವಾಗಿದ್ದು, ಗೆಜೆಟಿಯರಿನಲ್ಲಿ ಆ ಹೆಸರು ಇದಿಯೋ ಅಥವಾ ಇಲ್ಲವೋ ಎಂಬ ಬಗ್ಗೆ ನನಗೆ ಮಾಹಿತಿ ದೊರೆತಿಲ್ಲ. ಅಲ್ಲದೇ ಆ ದಾಖಲೆ ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ. ಪಾಲಿಕೆಯ ಕೌನ್ಸಿಲ್‌ ವ್ಯಾಪ್ತಿಯಲ್ಲು ಪ್ರಿನ್ಸೆಸ್‌ ರಸ್ತೆ ಹೆಸರಂತೂ ಕಂಡು ಬಂದಿಲ್ಲ ಎಂದು ಸ್ಟಷ್ಟನೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

12 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

12 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

12 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

12 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 day ago